ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜ.13, 14ರಂದು ನಗರದಲ್ಲಿ ಜರುಗಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್.ಒಡೇನಪುರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.13ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕ್ರೀಡಾಕೂಟ ಉದ್ಘಾಟಿಸುವರು. ವಿಧಾನ ಪರಿಷತ್ […]
ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜ.13, 14ರಂದು ನಗರದಲ್ಲಿ ಜರುಗಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್.ಒಡೇನಪುರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.13ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕ್ರೀಡಾಕೂಟ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್, ಕೆ.ಎಸ್.ನವೀನ, ಶಾಸಕರಾದ ಕೆ.ಎಸ್.ಬಸವಂತಪ್ಪ, ಬಿ.ಪಿ.ಹರೀಶ, ಬಸವರಾಜ ವಿ.ಶಿವಗಂಗಾ, ಬಿ.ದೇವೇಂದ್ರಪ್ಪ, ಡಿ.ಜಿ.ಶಾಂತನಗೌಡ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲರಾವ್, ಎಸ್ಪಿ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತೆ ರೇಣುಕಾ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಕ್ರೀಡಾಪಟುಗಳಿಗೆ ಸನ್ಮಾನಿಸುವರು ಎಂದರು.
ಜ.14ರಂದು ಸಂಜೆ 5.30ಕ್ಕೆ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯುವ ಸಮಾರೋಪ ಸಮಾರಂಭವನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಉದ್ಘಾಟಿಸುವರು. ಡಿಡಿಪಿಐ ಜಿ.ಕೊಟ್ರೇಶ ,ಕೃಷಿ ಇಲಾಖೆ ಉಪ ನಿರ್ದೇಶಕ ಆರ್.ತಿಪ್ಪೇಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಷಣ್ಮುಖಪ್ಪ ಭಾಗವಹಿಸುವರು.
Read also : ಮತದಾರರು ಪಟ್ಟಿಗೆ ಜ.11ಹಾಗೂ18ರಂದು ವಿಶೇಷ ನೋಂದಣಿ ಅಭಿಯಾನ
ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ 2,000ಕ್ಕೂ ಅಧಿಕ ಸರ್ಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ. 150ಕ್ಕೂ ಹೆಚ್ಚು ಇವೆಂಟ್ ಗಳಿದ್ದು, ಕ್ರೀಡೆಗಳು ಜಿಲ್ಲಾ ಕ್ರೀಡಾಂಗಣ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಸರ್ಕಾರಿ ನೌಕರರ ಸಮುದಾಯ ಭವನ ಹಾಗೂ ಮೇರಿ ದೇವಸ್ಯ ಸಭಾಂಗಣದಲ್ಲಿ ಜರುಗಲಿವೆ. ಸ್ಪರ್ಧಿಗಳಿಗೆ ಎರಡು ದಿನಗಳ ಕಾಲ ಪ್ರಯಾಣ ಭತ್ಯೆ ಹಾಗೂ ವಿಶೇಷ ಸಾಂದರ್ಭಿಕ ರಜೆ ಇರುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಪರಶುರಾಮಪ್ಪ,ಮುಖಂಡರಾದ ಎನ್.ಮಾರುತಿ, ಬಿ.ಪಾಲಾಕ್ಷಿ, ಬಿ.ಆರ್.ತಿಪ್ಪೇಸ್ವಾಮಿ, ಜಿ.ಓಬಳಪ್ಪ, ಸುಧಾ, ನರೇಶ್ವರ, ಸೋಮಶೇಖರಪ್ಪ ಮತ್ತಿತರರಿದ್ದರು.
Previous Article
ಧಾರ್ಮಿಕ ಆಚರಣೆಗಳಿಂದ ಧರ್ಮದ ಉಳಿವು ಸಾಧ್ಯ: ಓಂಕಾರ ಶಿವಾಚಾರ್ಯ ಸ್ವಾಮೀಜಿ
Next Article
ಮತದಾರರು ಪಟ್ಟಿಗೆ ಜ.11ಹಾಗೂ18ರಂದು ವಿಶೇಷ ನೋಂದಣಿ ಅಭಿಯಾನ