Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಂಡ್ಯ | ಈ ಬಾರಿ ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆ : 30 ತಂಡಗಳಿಂದ ಪಥ ಸಂಚಲನ

    1 week ago

    ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನವರಿ 26 ರ ಗಣರಾಜ್ಯೋತ್ಸವ ಆಚರಣೆ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಸಂಬಂಧಪಟ್ಟ ಎಲ್ಲರಿಗೂ ಆಹ್ವಾನ ಪತ್ರಿಕೆಯನ್ನು ತಲುಪಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಗೆ ಸರ್ಕಾರಿ ಕಚೇರಿಗಳು […]

    The post ಮಂಡ್ಯ | ಈ ಬಾರಿ ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆ : 30 ತಂಡಗಳಿಂದ ಪಥ ಸಂಚಲನ appeared first on nudikarnataka.



    ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

    ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನವರಿ 26 ರ ಗಣರಾಜ್ಯೋತ್ಸವ ಆಚರಣೆ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

    ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಸಂಬಂಧಪಟ್ಟ ಎಲ್ಲರಿಗೂ ಆಹ್ವಾನ ಪತ್ರಿಕೆಯನ್ನು ತಲುಪಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಗೆ ಸರ್ಕಾರಿ ಕಚೇರಿಗಳು ಶಾಲಾ-ಕಾಲೇಜುಗಳು ಹಾಗೂ ಕೋ ಆಪರೇಟಿವ್ ಸೊಸೈಟಿಗಳಲ್ಲಿ ಕಡ್ಡಾಯವಾಗಿ ಗಣರಾಜ್ಯೋತ್ಸವವನ್ನು ಆಯೋಜನೆ ಮಾಡಬೇಕು. ಸರ್ಕಾರಿ ಇಲಾಖೆಯ ಕಚೇರಿಗಳನ್ನು ದೀಪಾಲಂಕಾರ ಹಾಗೂ ತೋರಣಗಳಿಂದ ಶೃಂಗರಗೊಳಿಸಬೇಕು ಎಂದು ಹೇಳಿದರು.

    30 ತಂಡಗಳಿಂದ ಪಥ ಸಂಚಲನ
    ಗಣರಾಜ್ಯೋತ್ಸವದ ಅಂಗವಾಗಿ 30 ತಂಡಗಳಿಂದ ಪಥ ಸಂಚಲನವನ್ನು ನಡೆಸಲಾಗುವುದು. ಸಂಬಂಧಪಟ್ಟ ಅಧಿಕಾರಿಗಳು ಪಥ ಸಂಚಲನವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿ. ಕಾರ್ಯಕ್ರಮಕ್ಕೂ ಮುಂದೆ ಮೂರು ದಿನಗಳ ಕಾಲ ಪ್ರಾಯೋಗಿಕ ಪಥ ಸಂಚಲನ ಮಾಡಿ. ಪ್ರಾಯೋಗಿಕ ಪಥ ಸಂಚಲನ ಮಾಡುವ ಸಂದರ್ಭದಲ್ಲಿ ಪಥ ಸಂಚಲನಗಾರರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.

    ವೇದಿಕೆಯನ್ನು ಶಿಷ್ಟಾಚಾರ ದಂತೆ ನಿರ್ಮಿಸಿ ಹಾಗೂ ವೇದಿಕೆಗೆ ಸಂಬಂಧಪಟ್ಟಂತೆ ಸೌಂಡ್ ಸಿಸ್ಟಮ್, ಆಸನಗಳ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ. ಗಣರಾಜ್ಯೋತ್ಸವ ನಡೆಯುವ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವುದರಿಂದ ಮೈದಾನದಲ್ಲಿ ಧೂಳು ಹೇಳದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

    ಗಣರಾಜ್ಯೋತ್ಸವದ ದಿನದಂದು ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಅಧಿಕಾರಿಗಳಿಗೆ ನೀಡಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

    ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ ಮಾತನಾಡಿ ಸದರಿ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲೆಗಳಿಂದ ಮೂರು ಹಾಗೂ ಕಾಲೇಜುಗಳಿಂದ ಒಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಂದ ನಾಡಗೀತೆ ಮತ್ತು ರಾಷ್ಟ್ರಗೀತೆ ಗಾಯನವನ್ನು ಪ್ರಸ್ತುತ ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ಸೂಕ್ತ ಕ್ರಮ ವಹಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಹೇಳಿದರು.

    ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಪಶುಪಾಲನ ಇಲಾಖೆ ಉಪ ನಿರ್ದೇಶಕ ಶಿವಲಿಂಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ ಚೆಲುವಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    The post ಮಂಡ್ಯ | ಈ ಬಾರಿ ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆ : 30 ತಂಡಗಳಿಂದ ಪಥ ಸಂಚಲನ appeared first on nudikarnataka.

    Click here to Read More
    Previous Article
    ಮದ್ದೂರು | ಮಾಂಗಲ್ಯ ಸರ ಅಪಹರಿಸಲು ಯತ್ನಿಸಿದವರಿಗೆ ಸಾರ್ವಜನಿಕರಿಂದ ಧರ್ಮದೇಟು
    Next Article
    ಸರ್ಕಾರಿ ಶಾಲೆ ಮಕ್ಕಳಿಗೆ ನವೋದಯ ಪರೀಕ್ಷೆಯ ಪೂರ್ವ ಸಿದ್ಧತಾ ತರಬೇತಿ ನೀಡಿ : ಡಾ.ಕುಮಾರ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment