ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸಲು ಹಾಗೂ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪ್ರವಾಸೋದ್ಯಮ ಇಲಾಖೆ ವತಿಯಿಂದ ಮೊಬೈಲ್ ಕ್ಯಾಂಟೀನ್ ಖರೀದಿಗೆ ರೂ 5 ಲಕ್ಷಗಳ ಸಹಾಯಧನ ವಿತರಣೆ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2024-25 ನೇ ಸಾಲಿನ ಪ್ರವಾಸೋದ್ಯಮ ಇಲಾಖೆಯ ಮೊಬೈಲ್ ಕ್ಯಾಂಟೀನ್ ಖರೀದಿಗಾಗಿ ರೂ 5 ಲಕ್ಷಗಳ ಸಹಾಯಧನ ವಿತರಣೆ ಯೋಜನೆಯಡಿ ಸಹಾಯಧನ ಬಿಡುಗಡೆ ಮಾಡುವ ಸಂಬಂಧ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ […]
The post ಮೊಬೈಲ್ ಕ್ಯಾಂಟೀನ್ ತೆರೆಯಲು 5 ಲಕ್ಷ ರೂ. ಸಹಾಯಧನ : ಡಾ.ಕುಮಾರ appeared first on nudikarnataka.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸಲು ಹಾಗೂ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪ್ರವಾಸೋದ್ಯಮ ಇಲಾಖೆ ವತಿಯಿಂದ ಮೊಬೈಲ್ ಕ್ಯಾಂಟೀನ್ ಖರೀದಿಗೆ ರೂ 5 ಲಕ್ಷಗಳ ಸಹಾಯಧನ ವಿತರಣೆ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2024-25 ನೇ ಸಾಲಿನ ಪ್ರವಾಸೋದ್ಯಮ ಇಲಾಖೆಯ ಮೊಬೈಲ್ ಕ್ಯಾಂಟೀನ್ ಖರೀದಿಗಾಗಿ ರೂ 5 ಲಕ್ಷಗಳ ಸಹಾಯಧನ ವಿತರಣೆ ಯೋಜನೆಯಡಿ ಸಹಾಯಧನ ಬಿಡುಗಡೆ ಮಾಡುವ ಸಂಬಂಧ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದರಿ ಯೋಜನೆಯಡಿ ಜಿಲ್ಲೆಯಲ್ಲಿ 11 ಜನರಿಗೆ ಸಹಾಯಧನವನ್ನು ನೀಡುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಆರು ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಒಂದು ತಿಂಗಳ ಉದ್ಯಮಶೀಲತಾ ತರಬೇತಿಯನ್ನು ನೀಡಲಾಗಿದೆ ಎಂದರು.
ಉಳಿದ ಐದು ಜನರಿಗೆ ಎರಡನೇ ಹಂತದಲ್ಲಿ ತರಬೇತಿ ನೀಡಲು ಈಗಾಗಲೇ ಪ್ರಾರಂಭಿಸಲಾಗಿದೆ. ಸದರಿ ಆರು ಜನರು ಸಹಾಯಧನ ಪಡೆದು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಸಹಾಯಧನದ ಮೊತ್ತವನ್ನು ಸಂಪೂರ್ಣವಾಗಿ ಉದ್ಯಮಶೀಲತೆಗೆ ಬಳಸಿಕೊಳ್ಳಬೇಕು. ಕಳೆದ ಐದು ವರ್ಷಗಳ ಮಾಹಿತಿಯ ಆಧಾರದ ಮೇಲೆ ಜಿಲ್ಲೆಯಲ್ಲಿ ಹೆಚ್ಚು ಪ್ರವಾಸಿಗರು ಸೇರುವ ಸ್ಥಳಗಳ ಅನ್ವಯ ಅರ್ಹ ಆರು ಫಲಾನುಭವಿಗಳಿಗೆ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಮೊಬೈಲ್ ಕ್ಯಾಂಟೀನ್ ಸ್ಥಾಪನೆ ಮಾಡಲು ಸೂಕ್ತ ಸ್ಥಳ ಗುರುತಿಸಿ ಎಂದು ಹೇಳಿದರು.
ಸಹಾಯಧನ ಪಡೆದ ಅರ್ಹ ಫಲಾನುಭವಿಗಳು ಪ್ರವಾಸೋದ್ಯಮ ಸ್ಥಳಗಳಲ್ಲಿ ಮೊಬೈಲ್ ಕ್ಯಾಂಟೀನ್ ಗಳನ್ನು ಇಟ್ಟು ಪ್ರವಾಸಿಗರಿಗೆ ಶುಚಿಯಾದ ರುಚಿಯಾದ ಗುಣಮಟ್ಟದ ಆಹಾರವನ್ನು ಪೂರೈಸಿ. ಶುಚಿಯಾದ ಗುಣಮಟ್ಟದ ಆಹಾರವನ್ನು ನೀಡುವುದರ ಜೊತೆಗೆ ನಿಮ್ಮ ಮೊಬೈಲ್ ಕ್ಯಾಂಟೀನ್ ಬ್ರಾಂಡಿಂಗ್ ಅನ್ನು ಹೆಚ್ಚಿಸಿ ಎಂದು ಸೂಚಿಸಿದರು.
ಅರ್ಹ ಫಲಾನುಭವಿಗಳು ಸಹಾಯಧನದಿಂದ ಖರೀದಿಸಿದ ವಾಹನಗಳನ್ನು ಇತರೆರಿಗೆ ವರ್ಗಾಯಿಸುವಂತಿಲ್ಲ. ಫಲಾನುಭವಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮುಖಾಂತರ ಹೇಗೆ ಅನುಮತಿ ಪಡೆಯಬೇಕು ಎಂಬುದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಬೇಕು ಎಂದು ಹೇಳಿದರು.
ಮೊಬೈಲ್ ಕ್ಯಾಂಟೀನ್ ಸಹಾಯಧನ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳು ಆಹಾರ ಸೇವನೆಗೆ ಬರುವ ಪ್ರವಾಸಿಗರಿಗೆ ಗುಣಮಟ್ಟದ ಆಹಾರವನ್ನು ನೀಡಬೇಕು. ಬಳಸಿದ ಎಣ್ಣೆಗಳನ್ನು ಮತ್ತೆ ಬಳಸುವಂತಿಲ್ಲ. ಆಹಾರದ ಶುಚಿತ್ವ ಕಾಪಾಡುವುದರ ಜೊತೆ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
The post ಮೊಬೈಲ್ ಕ್ಯಾಂಟೀನ್ ತೆರೆಯಲು 5 ಲಕ್ಷ ರೂ. ಸಹಾಯಧನ : ಡಾ.ಕುಮಾರ appeared first on nudikarnataka.
Previous Article
ಸಿಎಂ ಸಿದ್ದರಾಮಯ್ಯಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್
Next Article
ಮದ್ದೂರು | ಮಾಂಗಲ್ಯ ಸರ ಅಪಹರಿಸಲು ಯತ್ನಿಸಿದವರಿಗೆ ಸಾರ್ವಜನಿಕರಿಂದ ಧರ್ಮದೇಟು