Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಂಡ್ಯ | ಗಾಂಜಾ ಮಾರಾಟ ಮಾಡಿ ಸಿಕ್ಕಿ ಬಿದ್ದವನಿಗೆ 6 ತಿಂಗಳು ಜೈಲು

    3 days ago

    ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಶನಿಮಹಾತ್ಮ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಆಟೋವೊಂದರಲ್ಲಿ ಗಾಂಜಾ ಸೊಪ್ಪನ್ನ ಮಾರಾಟ ಮಾಡಿ ಸಿಕ್ಕಿ ಬಿದ್ದ ಅಸಾಮಿಗೆ ಮಂಡ್ಯದ  2ನೇ ಅಪರ ಹಿರಿಯ ಪಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ 6 ತಿಂಗಳ ಸಾದಾ ಕಾರಾಗ್ರಹ ಸಜೆ ಹಾಗೂ 5 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ. ಮಹಮ್ಮದ್ ಅಕೀಲ್ ಗಾಂಜಾ ಮಾರಾಟ ಮಾಡಿ ಜೈಲು ಶಿಕ್ಷೆ ಗುರಿಯಾದವನು. ಏನಿದು ಘಟನೆ ? ನ.15, 2021 ರ ಸಂಜೆ 4 ಗಂಟೆಯ ಸಮಯದಲ್ಲಿ […]

    The post ಮಂಡ್ಯ | ಗಾಂಜಾ ಮಾರಾಟ ಮಾಡಿ ಸಿಕ್ಕಿ ಬಿದ್ದವನಿಗೆ 6 ತಿಂಗಳು ಜೈಲು appeared first on nudikarnataka.



    ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಶನಿಮಹಾತ್ಮ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಆಟೋವೊಂದರಲ್ಲಿ ಗಾಂಜಾ ಸೊಪ್ಪನ್ನ ಮಾರಾಟ ಮಾಡಿ ಸಿಕ್ಕಿ ಬಿದ್ದ ಅಸಾಮಿಗೆ ಮಂಡ್ಯದ  2ನೇ ಅಪರ ಹಿರಿಯ ಪಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ 6 ತಿಂಗಳ ಸಾದಾ ಕಾರಾಗ್ರಹ ಸಜೆ ಹಾಗೂ 5 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ.

    ಮಹಮ್ಮದ್ ಅಕೀಲ್ ಗಾಂಜಾ ಮಾರಾಟ ಮಾಡಿ ಜೈಲು ಶಿಕ್ಷೆ ಗುರಿಯಾದವನು.

    ಏನಿದು ಘಟನೆ ?

    ನ.15, 2021 ರ ಸಂಜೆ 4 ಗಂಟೆಯ ಸಮಯದಲ್ಲಿ ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಶ್ರೀ ಶನಿಮಹಾತ್ಮ ದೇವಸ್ಥಾನದ ಬಳಿ ಆರೋಪಿ  ಮಹಮ್ಮದ್ ಅಕೀಲ್ (ಕೆಎ-11 ಎ-2353) ಅಟೋ ರಿಕ್ಷಾದಲ್ಲಿ ಕುಳಿತುಕೊಂಡು ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ಹಳದಿ ಬಣ್ಣದ ಪ್ಲಾಸ್ಟಿಕ್ ಕವರ್ ನಲ್ಲಿ 33 ಚಿಕ್ಕ ಪ್ಲಾಸ್ಟಿಕ್ ಕವರ್ ಗಳಲ್ಲಿ ಸುಮಾರು 70 ಗ್ರಾಂ ತೂಕದ ಗಾಂಜಾ ಸೊಪ್ಪನ್ನು ಇಟ್ಟುಕೊಂಡು ಬರುವ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ, ಈ ಬಗ್ಗೆ ಸುಳಿವು ಪಡೆದ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿ, ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.

    ಈ ಪ್ರಕರಣವು ಮಂಡ್ಯದ 2ನೇ ಅಪರ ಹಿರಿಯ ಪಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಯೋಗೇಶ್ವರಿ ಅವರ ಮುಂದೆ ವಿಚಾರಣೆಗೆ ಬಂದು, ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 6 ತಿಂಗಳ ಸಾದಾ ಕಾರಾಗ್ರಹ ಸಜೆ ಮತ್ತು ರೂ.5000 ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ.

    ಸರ್ಕಾರ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರು ಕರುಣಶ್ರೀ.ಎಂ.ಕೆ ವಾದ ಮಂಡನೆ ಮಾಡಿದ್ದರು.

    The post ಮಂಡ್ಯ | ಗಾಂಜಾ ಮಾರಾಟ ಮಾಡಿ ಸಿಕ್ಕಿ ಬಿದ್ದವನಿಗೆ 6 ತಿಂಗಳು ಜೈಲು appeared first on nudikarnataka.

    Click here to Read More
    Previous Article
    ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯರಾಗಬೇಕು : ರವಿಕುಮಾರ್
    Next Article
    ರಾಜ್ಯದಲ್ಲಿ 4,100 ಮುಜರಾಯಿ ದೇವಾಲಯ ನಾಪತ್ತೆ : ತನಿಖೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ. ರವಿ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment