Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    MNREGA ಕಾಯ್ದೆ ಪುನಃ ಸ್ಥಾಪನೆ ಆಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

    3 days ago

    MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಸಂಗ್ರಾಮ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು. ಕಳೆದ […]

    The post MNREGA ಕಾಯ್ದೆ ಪುನಃ ಸ್ಥಾಪನೆ ಆಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ appeared first on nudikarnataka.



    MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

    ಅವರು ಇಂದು ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಸಂಗ್ರಾಮ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

    ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

    ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. MNREGA ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ MNREGA ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು.

    ದೇಶದಲ್ಲಿ 12.16 ಕೋಟಿ ಕಾರ್ಮಿಕರಿಗೆ ಕೆಲಸ

    ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದಾಗ MNREGA ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿಸಿದ್ದರು. ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದರು.

    ವಿಬಿಜಿ ರಾಮ್ ಜಿ ಮೂಲಕ ಮತ್ತೊಮ್ಮೆ ಗಾಂಧೀಜಿ ಕೊಲೆ

    ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮ ಗಾಂಧಿ ಕೊಂದ ನಾಥೂರಾಮ ಇದು. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ. ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು ಎಂದರು.

    ನರೇಗಾ ಬಚಾವ್ ಆಂದೋಲನ ಜನಾಂದೋಲನವಾಗಬೇಕು

    ಈಗ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ. ಅಲ್ಲಿ ಕೆಲಸ ಮಾಡಬೇಕು. ಈಗ ರಾಜ್ಯಗಳು ಶೇ 40 ವೆಚ್ಚವನ್ನು ಭರಿಸಬೇಕಿದೆ. 2500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ನರೇಗಾ ಬಚಾವ್ ಆಂದೋಲನವನ್ನು ರೂಪಿಸಿದೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು ಎಂದರು.

    ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಸಿ.ಸುಧಾಕರ್, ಕೆ.ಹೆಚ್.ಮುನಿಯಪ್ಪ, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ‌, ಮಾಜಿ ಸಚಿವರುಗಳು, ಹಾಲಿ ಶಾಸಕರು ಮತ್ತು ಸಂಸದರು ಸೇರಿ AICC ಕಾರ್ಯದರ್ಶಿಗಳು, KPCC ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ಹಲವು ಮುಖಂಡರುಗಳು‌ ಉಪಸ್ಥಿತರಿದ್ದರು.

    The post MNREGA ಕಾಯ್ದೆ ಪುನಃ ಸ್ಥಾಪನೆ ಆಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ appeared first on nudikarnataka.

    Click here to Read More
    Previous Article
    ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ನಾವ್ಯಾರು ಕೇಳಿಲ್ಲ; ಡಿಕೆಶಿ ಸಿಎಂ ಆಗುವ ವಿಶ್ವಾಸ ವ್ಯಕ್ತಪಡಿಸಿದ ‘ಕೈ’ ಶಾಸಕ
    Next Article
    ರಾಜ್ಯದ NH-275 ಹೆದ್ದಾರಿ ಸುರಕ್ಷತೆಗಾಗಿ ಕೇಂದ್ರದಿಂದ 94.08 ಕೋಟಿ ರೂ. ಅನುದಾನ- ಸಂಸದ ಯದುವೀರ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment