Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಟಪಾಡಿ ಶ್ರೀನಿಕೇತನ ಶಾಲೆಯ ವಾರ್ಷಿಕೋತ್ಸವ

    2 weeks ago

    ಬ್ರಹ್ಮಾವರ: ಶ್ರೀನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ...

    The post ಮಟಪಾಡಿ ಶ್ರೀನಿಕೇತನ ಶಾಲೆಯ ವಾರ್ಷಿಕೋತ್ಸವ first appeared on Udupi Times.



    ಬ್ರಹ್ಮಾವರ: ಶ್ರೀನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು.

    ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಇದರ ನಿವೃತ್ತ ವ್ಯವಸ್ಥಾಪಕ ಗೋಪಾಲ ಗಾಣಿಗ ಮಟಪಾಡಿ ವಹಿಸಿದ್ದರು.
    ಕಾರ್ಯಕ್ರಮದಲ್ಲಿ ಬಿಎಸ್ ಎನ್ ಎಲ್ ಇದರ ನಿವೃತ್ತ ಮಹಾಪ್ರಭಂಧಕರಾದ ಚಂದ್ರಶೇಖರ ಕಲ್ಕೂರ ಮಟಪಾಡಿ ಇವರಿಗೆ ಶಾಲೆಯ ಪರವಾಗಿ ಗೌರವಾರ್ಪಣೆ ಜರುಗಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾ ಪಿ, ಜನನಿ ಎಂಟರ್ ಪ್ರೈಸಸ್ ಇದರ ಆಳಿತ ಪಾಲುದಾರ ಪ್ರಶಾಂತ್ ಕಾಡೂರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ಇದರ ಯೋಜನಾಧಿಕಾರಿ ರಮೇಶ್ ಪಿ ಕೆ, ಭಾಗವಹಿಸಿದ್ದರು. ವಿಜಯ ಸೇವಾ ಪ್ರತಿಷ್ಠಾನ ಮಟಪಾಡಿ ಟ್ರಸ್ಟಿ ಜಯರಾಮ ನಾಯರಿ ಅವರಿಗೆ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
    ಶಾಲೆಯ ಹಳೆ ವಿದ್ಯಾರ್ಥಿ ಚೇತನ್ ಜಿ. ಪೂಜಾರಿ ಸ್ವಸ್ತಿ ವಾಚನ ಮಾಡಿದರು.

    ಕಾರ್ಯಕ್ರಮದಲ್ಲಿ ವಿಜಯ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಗಿರೀಶ್ ಚಂದ್ರ ಆಚಾರ್ಯ, ಶ್ರೀ ವಾಣಿ ವಿದ್ಯಾಭಿವೃದ್ಧಿ ಸಂಘ ನಡೂರು ಅಧ್ಯಕ್ಷರಾದ ಬಿ. ಭೋಜ ಹೆಗ್ಡೆ, ಶ್ರೀನಿಕೇತನ ಶಾಲಾಭಿವೃದ್ಧಿ ಟ್ರಸ್ಟ್ ಮಟಪಾಡಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಶಿವರಾಮ ಶೆಟ್ಟಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯನಿ ಶ್ಯಾಮಲ, ವಿದ್ಯಾರ್ಥಿ ನಾಯಕರಾದ ಶಶಾಂಕ್ ರಾಕೇಶ್ ಉಪಸ್ಥಿತರಿದ್ದರು.
    ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯನಿ ಶ್ಯಾಮಲ ವರದಿ ಮಂಡಿಸಿದರು. ಸನ್ಮಾನ ಪತ್ರವನ್ನು ದಿವ್ಯಾ, ಮತ್ತು ಸ್ನೇಹ ವಾಚಿಸಿದರು , ಬಹುಮಾನ ವಿಜೇತರ ಪಟ್ಟಿಯನ್ನು ಪವಿತ್ರ, ರಜನಿ, ಜಯಲಕ್ಷ್ಮೀ, ಆಶಾ, ಸುಕನ್ಯಾ ವಾಚಿಸಿದರು. ಶಿವರಾಮ ಶೆಟ್ಟಿ ಸ್ವಾಗತಿಸಿ, ರತಿ ಧನ್ಯವಾದ ಸಲ್ಲಿಸಿದರು. ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    The post ಮಟಪಾಡಿ ಶ್ರೀನಿಕೇತನ ಶಾಲೆಯ ವಾರ್ಷಿಕೋತ್ಸವ first appeared on Udupi Times.

    Click here to Read More
    Previous Article
    ಅಂತರ್ ರಾಜ್ಯ ದ್ವಿಚಕ್ರ ವಾಹನ ಕಳವು ಆರೋಪಿಯ ಬಂಧಿಸಿದ ಶಿರ್ವ ಪೊಲೀಸರು
    Next Article
    ಕಾರ್ಕಳ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು- ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment