Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಸೈಯಿಪುದ್ದಿನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ರಂ ವಿರುದ್ಧ ಲುಕ್‌ಔಟ್ ನೋಟೀಸ್

    2 weeks ago

    ಉಡುಪಿ: ಕೊಡವೂರಿನಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಯಿಪುದ್ದಿನ್ ಆತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ...

    The post ಸೈಯಿಪುದ್ದಿನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ರಂ ವಿರುದ್ಧ ಲುಕ್‌ಔಟ್ ನೋಟೀಸ್ first appeared on Udupi Times.



    ಉಡುಪಿ: ಕೊಡವೂರಿನಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಯಿಪುದ್ದಿನ್ ಆತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಅಕ್ರಂ ವಿರುದ್ಧ ಲುಕ್‌ಔಟ್ ನೋಟೀಸ್ ಜಾರಿ ಮಾಡಲಾಗಿದೆ.

    2016ರ ಜು.14ರಂದು ಆತ್ರಾಡಿ ಸಮೀಪದ ಶೇಡಿಗುಡ್ಡೆ ಎಂಬಲ್ಲಿ ನಡೆದ ಕೆಮ್ಮಣ್ಣುವಿನ ಶೇಖ್ ಮಹಮ್ಮದ್ ತಸ್ಲೀಮ್ ಕೊಲೆ ಪ್ರಕರಣದಲ್ಲಿ ಸೈಫ್ ಜೊತೆ ಅಕ್ರಂ ಕೂಡ ಆರೋಪಿಯಾಗಿದ್ದನು. ಆ ಬಳಿಕ ವ್ಯವಾಹರದಲ್ಲಿ ಇವರಿಬ್ಬರು ಜೊತೆಯಾಗಿದ್ದರು.

    ಸೈಫ್ ಕೊಲೆಗೆ ಒಂದು ವಾರ ಮೊದಲು ಅಕ್ರಂ, ಕೊಲೆಗೆ ಸಂಬಂಧಿಸಿ ಎಲ್ಲ ರೀತಿಯ ಸಂಚು ರೂಪಿಸಿ, ದುಬೈಗೆ ಪರಾರಿಯಾಗಿದ್ದನು. ಇದೇ ವೇಳೆ ಅಕ್ರಂ, ವ್ಯವಹಾರಕ್ಕೆ ಸಂಬಂಧಿಸಿ ಸಾಲಗಳನ್ನು ಸೈಫ್ ಮತ್ತು ಸೈಫ್‌ನ ಪತ್ನಿ ಹೆಸರಿಗೆ ಹಾಗೂ ಲಾಭದ ವ್ಯವಹಾರವನ್ನು ತನ್ನ ಪಾಲಿಗೆ ಮಾಡಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಇದೀಗ ಸೈಫ್ ಕೊಲೆಗೆ ಸಂಚು ರೂಪಿಸಿ ವಿದೇಶದಲ್ಲಿ ತಲೆಮರೆಸಿ ಕೊಂಡಿರುವ ಅಕ್ರಂ ಬಂಧನಕ್ಕೆ ಉಡುಪಿ ಪೊಲೀಸರು ಕ್ರಮ ಜರಗಿಸಿದ್ದು, ಇಂಟರ್ ಪೋಲ್ ಸಹಾಯದಿಂದ ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    The post ಸೈಯಿಪುದ್ದಿನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ರಂ ವಿರುದ್ಧ ಲುಕ್‌ಔಟ್ ನೋಟೀಸ್ first appeared on Udupi Times.

    Click here to Read More
    Previous Article
    ಗೃಹಲಕ್ಷ್ಮೀ ಹಣ ವಂಚಿಸಿದ ರಾಜ್ಯ ಸರ್ಕಾರದ ವಿರುದ್ಧವೂ ಮಹಿಳಾ ಕಾಂಗ್ರೆಸ್ ಪ್ರತಿಭಟಿಸಲಿ: ನೀತಾ ಪ್ರಭು
    Next Article
    ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment