Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

    2 weeks ago

    ಉಡುಪಿ: ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಭ್ರಮದಿಂದ ನಡೆಯಿತು. ಪರ್ಯಾಯ...

    The post ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ first appeared on Udupi Times.



    ಉಡುಪಿ: ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಭ್ರಮದಿಂದ ನಡೆಯಿತು.

    ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡುವುದರ ಮೂಲಕ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಹೆಯ ಡೆಪ್ಯುಟಿ ಎವಲ್ಯೂಯೇಷನ್ ಡಾ. ಮಧುಕರ ಮಲ್ಯ ಇವರು “ಮೊಬೈಲ್ ಬಳಕೆಯನ್ನು ಉತ್ತಮ ಕಾರ್ಯಗಳಿಗೆ ಬಳಸಿಕೊಂಡು ಹೊರಾಂಗಣ ಆಟಗಳಿಗೆ ಪ್ರಾಮುಖ್ಯತೆಯನ್ನು ನೀಡಿ ಎಂದು ಹೇಳಿದರು”. ಮುಖ್ಯ ಅತಿಥಿಗಳಾದ ಮುನಿಯಾಲು ಆಯುರ್ವೇದ ಕಾಲೇಜಿ ಸಹಾಯಕ ಪ್ರಾಧ್ಯಾಪಕ ಡಾ. ರಶ್ಮಿ ಕಲ್ಕೂರ್ ಇವರು “ಎಲ್ಲರೂ ಕಲೆಗೆ ಪ್ರಾಮುಖ್ಯತೆಯನ್ನು ನೀಡಿ ಉತ್ತಮ ಸಂಸ್ಕಾರ ಬೆಳೆಸಿಕೊಂಡು ಆರೋಗ್ಯವಂತರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕೆಂದು ತಿಳಿಸಿದರು. ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಟಿ.ರಂಗ ಪೈ ಇವರು ಸಂದರ್ಭೋಚಿತವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯಿನಿ ವಿನುತಾ ಎಸ್ ನಾಯಕ್, ಶಾಲಾ ವಾರ್ಷಿಕ ವರದಿ ವಾಚಿಸಿದರು. ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸುರೇಂದ್ರ ಮೆಂಡನ್ ಶುಭ ಹಾರೈಸಿದರು. ಶಾಲೆಯಲ್ಲಿ 25 ವರ್ಷ ಸೇವೆ ಪೂರ್ಣಗೊಳಿಸಿರುವ ಶಾಲಾ ಮುಖ್ಯೋಪಾಧ್ಯಾಯಿನಿ ವಿನುತಾ ಎಸ್ ನಾಯಕ್, ನರ್ಸರಿ ಶಾಲಾ ಶಿಕ್ಷಕಿ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಜಯಶ್ರೀಯವರನ್ನು ಶಾಲಾ ಪರವಾಗಿ ಹಾಗೂ ಶಿಕ್ಷಕ ರಕ್ಷಕ ಸಂಘದ ಪರವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು. ಶಿಕ್ಷಕಿಯವರಾದ ನಂದಾ ಕೃಷ್ಣ ಸ್ವಾಗತಿಸಿ ಕಲ್ಪನಾ, ಉಮಾಜ್ಯೋತಿ ಅತಿಥಿ ಪರಿಚಯ ನೀಡಿದರು. ಜಯಲಕ್ಷ್ಮಿ ವಂದಿಸಿದರು. ಶಿಕ್ಷಕಿ ವೀಣಾ ಕಾಮತ್ ನಿರ್ದೇಶನದಲ್ಲಿ ವಿದ್ಯಾರ್ಥಿಗಳಾದ ತನ್ವಿ, ಗ್ರೀಷ್ಮ, ಪ್ರಸಿದ್ಧಿ ಆಚಾರ್ಯ, ಐಶ್ವರ್ಯ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಮಕ್ಕಳಿಂದ ವಿವಿಧ ನೃತ್ಯ ಕಾರ್ಯಕ್ರಮ ಹಾಗೂ ಭುವನ್ ಮಣಿಪಾಲ ನಿರ್ದೇಶನದಲ್ಲಿ ಏಳನೇ ತರಗತಿಯ ಮಕ್ಕಳ ನಾಟಕ ಮನರಂಜಿಸಿತು.

    The post ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ first appeared on Udupi Times.

    Click here to Read More
    Previous Article
    ಸೈಯಿಪುದ್ದಿನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ರಂ ವಿರುದ್ಧ ಲುಕ್‌ಔಟ್ ನೋಟೀಸ್
    Next Article
    ಸಹ್ಯಾದ್ರಿಯ ಪ್ರೊ. ಪ್ರಸಾದ್ ಚಂದ್ರನ್ ಎನ್. ಇಂಜಿನಿಯರಿಂಗ್ ಪಿಎಚ್.ಡಿ ಪದವಿ ಪ್ರದಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment