Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಂಡ್ಯ | ಶಾಸಕ ರವಿಕುಮಾರ್ ಹುಟ್ಟುಹಬ್ಬ ; ಉಪಹಾರ ವಿತರಣೆ – ರಕ್ತದಾನ

    2 weeks ago

    ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗೌಡ ಗಣಿಗರವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕೆಡಿಪಿ ಸದಸ್ಯ ಸಿ.ಎಂ.ದ್ಯಾವಪ್ಪ ಅವರ ನೇತೃತ್ವ ದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಕ್ತದಾನ ಶಿಬಿರ ನೆಡೆಯಿತು. ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ ಶಾಸಕ ರವಿಕುಮಾರ್ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಅರ್ಥಗರ್ಭಿತವಾಗಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. ರಕ್ತದಾನ ಶ್ರೇಷ್ಠವಾದ ಪ್ರಕ್ರಿಯೆಯಾಗಿದ್ದು ಹೆಚ್ಚಿನ ಆಸಕ್ತಿಯಿಂದ ಕಾಂಗ್ರೆಸ್ ಕಾರ್ಯಕರ್ತರು […]

    The post ಮಂಡ್ಯ | ಶಾಸಕ ರವಿಕುಮಾರ್ ಹುಟ್ಟುಹಬ್ಬ ; ಉಪಹಾರ ವಿತರಣೆ – ರಕ್ತದಾನ appeared first on nudikarnataka.



    ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗೌಡ ಗಣಿಗರವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕೆಡಿಪಿ ಸದಸ್ಯ ಸಿ.ಎಂ.ದ್ಯಾವಪ್ಪ ಅವರ ನೇತೃತ್ವ ದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಕ್ತದಾನ ಶಿಬಿರ ನೆಡೆಯಿತು.

    ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ ಶಾಸಕ ರವಿಕುಮಾರ್ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಅರ್ಥಗರ್ಭಿತವಾಗಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. ರಕ್ತದಾನ ಶ್ರೇಷ್ಠವಾದ ಪ್ರಕ್ರಿಯೆಯಾಗಿದ್ದು ಹೆಚ್ಚಿನ ಆಸಕ್ತಿಯಿಂದ ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನ ಮಾಡುತ್ತಿದ್ದಾರೆ ಎಂದು ಹೇಳಿದರು.

    ಶಾಸಕ ರವಿಕುಮಾರ್ ಅವರಿಗೆ ಹೆಚ್ಚಿನ ಆಯಸ್ಸು,ಆರೋಗ್ಯ, ಇನ್ನು ಹೆಚ್ಚಿನ ಅಧಿಕಾರವನ್ನು ದೇವರು ಕರುಣಿಸಲಿ ಎಂದು ಹುಟ್ಟು ಹಬ್ಬದ ಶುಭಾಶಯ ಕೋರಿದರು.

    ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ. ದ್ಯಾವಪ್ಪ ಮಾತನಾಡಿ ಶಾಸಕ ರವಿಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ಶ್ರೇಷ್ಠವಾದ ಕೆಲಸ ಮಾಡುತ್ತಿದ್ದೇವೆ. ರಕ್ತದಾನ ಮಹಾದಾನವಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗೇಂದ್ರ ಕುಮಾರ್, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್. ಅಶೋಕ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಚಿಕ್ಕಬಳ್ಳಿ ಕೃಷ್ಣ, ಸುಂಡಹಳ್ಳಿ ಮಂಜುನಾಥ್, ಹನ್ಸಿಯ ಬಾನು, ಜ್ಯೋತಿ, ಅಂಜನಾ, ಶ್ರೀಧರ್ ಶಕುಂತಲಾ, ವೀಣಾ ಸೇರಿದಂತೆ ಇತರರು ಇದ್ದರು.

    ಅನ್ನ ದಾಸೋಹ

    ಮಂಡ್ಯ ಶಾಸಕ ಪಿ.ರವಿಕುಮಾರ್ ಅವರು ಇನ್ನು ಉತ್ತಮ ಕೆಲಸ ಮಾಡುವ ಮೂಲಕ ಮಂಡ್ಯ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ಮಾದರಿ ಕ್ಷೇತ್ರ ಮಾಡಲಿ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ
    ಹೆಚ್.ಅಶೋಕ್ ಹೇಳಿದರು.

    ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾಸ್ಪತ್ರೆ ಹೆರಿಗೆ ವಾರ್ಡ್ ಆವರಣದಲ್ಲಿರುವ ಮಮತೆಯ ಮಡಿಲು ನಿತ್ಯ ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಆವರ ಸಂಬಂಧಕರಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಅಶೋಕ್ ಅವರು ಬೆಳಗ್ಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಅನ್ನ ದಾಸೋಹ ಏರ್ಪಡಿಸಿ ಏರ್ಪಡಿಸಿ ಅವರು ಮಾತನಾಡಿದರು

    ನವ ಮಂಡ್ಯದ ಅಭಿವೃದ್ಧಿ ಕನಸ್ಸನ್ನು ಹೊತ್ತು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತಿರುವ ಶಾಸಕ ರವಿಕುಮಾರ್ ಅವರಿಗೆ ದೇವರು ಆರೋಗ್ಯ,ಆಯಸ್ಸು ಕರುಣಿಸುವ ಮೂಲಕ ಹೆಚ್ಚಿನ ಅಧಿಕಾರ ಕೊಡಲಿ ಎಂದು ಶುಭ ಕೋರಿದರು.

    ಈ ಸಂದರ್ಭದಲ್ಲಿ ಅಂಜನಾ ಶ್ರೀಕಾಂತ್, ಮಂಡ್ಯ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಲತಾ, ಚಂದಗಾಲು ವಿಜಯಕುಮಾರ್, ಶ್ರೀಧರ್, ಸುಂದರ್, ಚನ್ನಪ್ಪ, ಹಳುವಾಡಿ ವೆಂಕಟೇಶ್,ಅಭಿಲಾಶ್, ಸೇರಿದಂತೆ ಭಾಗವಹಿಸಿದ್ದರು

    The post ಮಂಡ್ಯ | ಶಾಸಕ ರವಿಕುಮಾರ್ ಹುಟ್ಟುಹಬ್ಬ ; ಉಪಹಾರ ವಿತರಣೆ – ರಕ್ತದಾನ appeared first on nudikarnataka.

    Click here to Read More
    Previous Article
    ರಾಜ್ಯಾದ್ಯಂತ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆ – ಸುಬ್ರಹ್ಮಣ್ಯ
    Next Article
    ಮಂಡ್ಯ | ಬೇಬಿಕಲಾ ಅವರಿಗೆ ಪಿಹೆಚ್.ಡಿ ಪದವಿ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment