Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ‘ನಾರಾಯಣ ಗುರು ಚಿಂತನೆ ರವೀಂದ್ರನಾಥ ಟ್ಯಾಗೋರ್‌ ಅವರನ್ನು ಪ್ರಭಾವಿಸಿತ್ತು’ – ಸಿಎಂ ಸಿದ್ದರಾಮಯ್ಯ

    2 weeks ago

    ನಾರಾಯಣ ಗುರುಗಳ ನೈತಿಕ ಮತ್ತು ಸೈದ್ಧಾಂತಿಕ ಚಿಂತನೆಗಳು ರವೀಂದ್ರನಾಥ ಟ್ಯಾಗೋರ್‌ ಅವರನ್ನು ಪ್ರಭಾವಿಸಿತು. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ವಿಭಜಿಸುವುದು ದೊಡ್ಡ ಅನ್ಯಾಯ ಎಂದು ಟ್ಯಾಗೋರ್ ಒಪ್ಪಿಕೊಂಡರು. ಟ್ಯಾಗೋರ್ ಅವರ ‘ವಿಶ್ವಮಾನವ’ (Universal Man) ಪರಿಕಲ್ಪನೆಗೆ ನಾರಾಯಣ ಗುರುಗಳ ಚಿಂತನೆಗಳೇ ಸ್ಫೂರ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಲಕು ಹಾಕಿದರು. ಶಿವಗಿರಿ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಮಾತನಾಡಿದ ಅವರು, ನಾರಾಯಣ ಗುರುಗಳು ಆಧ್ಯಾತ್ಮಿಕತೆ, ವೈಚಾರಿಕತೆ, ಮಾನವತಾವಾದ ಮತ್ತು ಸಾಮಾಜಿಕ ನ್ಯಾಯವನ್ನು ಬೆಸೆಯುವ ಮೂಲಕ ಆಧುನಿಕ ಭಾರತದ ಸೈದ್ಧಾಂತಿಕ ಹಾದಿಯನ್ನು ನಿರ್ಮಿಸಿದರು. ಜಾತಿವ್ಯವಸ್ಥೆ […]

    The post ‘ನಾರಾಯಣ ಗುರು ಚಿಂತನೆ ರವೀಂದ್ರನಾಥ ಟ್ಯಾಗೋರ್‌ ಅವರನ್ನು ಪ್ರಭಾವಿಸಿತ್ತು’ – ಸಿಎಂ ಸಿದ್ದರಾಮಯ್ಯ appeared first on nudikarnataka.



    ನಾರಾಯಣ ಗುರುಗಳ ನೈತಿಕ ಮತ್ತು ಸೈದ್ಧಾಂತಿಕ ಚಿಂತನೆಗಳು ರವೀಂದ್ರನಾಥ ಟ್ಯಾಗೋರ್‌ ಅವರನ್ನು ಪ್ರಭಾವಿಸಿತು. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ವಿಭಜಿಸುವುದು ದೊಡ್ಡ ಅನ್ಯಾಯ ಎಂದು ಟ್ಯಾಗೋರ್ ಒಪ್ಪಿಕೊಂಡರು. ಟ್ಯಾಗೋರ್ ಅವರ ‘ವಿಶ್ವಮಾನವ’ (Universal Man) ಪರಿಕಲ್ಪನೆಗೆ ನಾರಾಯಣ ಗುರುಗಳ ಚಿಂತನೆಗಳೇ ಸ್ಫೂರ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಲಕು ಹಾಕಿದರು.

    ಶಿವಗಿರಿ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಮಾತನಾಡಿದ ಅವರು, ನಾರಾಯಣ ಗುರುಗಳು ಆಧ್ಯಾತ್ಮಿಕತೆ, ವೈಚಾರಿಕತೆ, ಮಾನವತಾವಾದ ಮತ್ತು ಸಾಮಾಜಿಕ ನ್ಯಾಯವನ್ನು ಬೆಸೆಯುವ ಮೂಲಕ ಆಧುನಿಕ ಭಾರತದ ಸೈದ್ಧಾಂತಿಕ ಹಾದಿಯನ್ನು ನಿರ್ಮಿಸಿದರು. ಜಾತಿವ್ಯವಸ್ಥೆ ಇನ್ನೂ ಹೋಗಿಲ್ಲ, ಅದು ತನ್ನ ಸ್ವರೂಪವನ್ನು ಬದಲಿಸಿಕೊಂಡಿದೆ. ನಾರಾಯಣ ಗುರುಗಳು ಈ ಅಪಾಯವನ್ನು ಮುನ್ಸೂಚಿಸಿದ್ದರು. ಧರ್ಮವು ಕರುಣೆ ಮತ್ತು ನೈತಿಕತೆಯಿಂದ ದೂರವಾದಾಗ, ಅದು ಕೇವಲ ಅಧಿಕಾರ ಚಲಾಯಿಸುವ ಸಾಧನವಾಗುತ್ತದೆ ಎಂದು ಅವರು ಅರ್ಥಮಾಡಿಕೊಂಡಿದ್ದರು ಎಂದು ತಿಳಿಸಿದರು.

    ಧಾರ್ಮಿಕ ಬಹುಸಂಖ್ಯಾತವಾದ, ನ್ಯಾಯ ಮತ್ತು ಸಮಾನತೆಯಿಲ್ಲದ ಯಾವುದೇ ರಾಷ್ಟ್ರೀಯತೆ ಅಥವಾ ರಾಜಕೀಯವು ಮನುಕುಲಕ್ಕೆ ಶಾಪ ಎಂದು ಗುರುಗಳು ಎಚ್ಚರಿಸಿದ್ದರು. ಸಾಮಾಜಿಕ ನ್ಯಾಯವಿಲ್ಲದ ರಾಷ್ಟ್ರ ನಿರ್ಮಾಣವು ಕೇವಲ ಆಡಳಿತಾತ್ಮಕ ವ್ಯವಸ್ಥೆಯಾಗಲಿದೆಯೇ ಹೊರತು ಪ್ರಜಾಪ್ರಭುತ್ವವಾಗುವುದಿಲ್ಲ ಎಂದು ಅವರು ಸಂದೇಶ ಸಾರಿದ್ದರು ಎಂದರು.

    ಗುರುಗಳು ಕೇರಳದಲ್ಲಿ ನೆಲೆಸಿದ್ದರೂ, ಅವರ ಪ್ರಭಾವವು ಭಾಷೆ ಮತ್ತು ರಾಜ್ಯದ ಗಡಿಗಳನ್ನು ಮೀರಿ ಕರ್ನಾಟಕದ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡು ಭಾಗಗಳಲ್ಲಿ ಸುಧಾರಣಾ ಚಳವಳಿಗಳನ್ನು ರೂಪಿಸಿತು. ಕರ್ನಾಟಕ ಕರಾವಳಿಯ ಬಿಲ್ಲವ, ಈಡಿಗ, ಮೊಗವೀರ ಮತ್ತು ಇತರೆ ಹಿಂದುಳಿದ ಸಮುದಾಯಗಳು ನಾರಾಯಣ ಗುರುಗಳ ಸ್ವಾಭಿಮಾನ, ಶಿಕ್ಷಣ ಮತ್ತು ಸಂಘಟನೆಯ ಕರೆಯಿಂದ ಸ್ಫೂರ್ತಿ ಪಡೆದವು. ಇದು ಈ ಪ್ರದೇಶದಲ್ಲಿ ಕೋಮು ಶಕ್ತಿಗಳ ವಿಭಜನೆಯ ಪ್ರಯತ್ನಗಳಿಗೆ ಬಲವಾದ ಪ್ರತಿರೋಧವನ್ನು ಒಡ್ಡಲು ಪ್ರಮುಖ ಕಾರಣವಾಗಿದೆ ಎಂದರು.

    The post ‘ನಾರಾಯಣ ಗುರು ಚಿಂತನೆ ರವೀಂದ್ರನಾಥ ಟ್ಯಾಗೋರ್‌ ಅವರನ್ನು ಪ್ರಭಾವಿಸಿತ್ತು’ – ಸಿಎಂ ಸಿದ್ದರಾಮಯ್ಯ appeared first on nudikarnataka.

    Click here to Read More
    Previous Article
    ಮಂಡ್ಯಕ್ಕೆ ಕಾರ್ಖಾನೆ ತರುವುದಿದ್ದರೆ ಕಂಪನಿ ಮೂಲಕ ಅರ್ಜಿ ಸಲ್ಲಿಸಿ : ಗಂಗಾಧರ್
    Next Article
    ಎಲ್ಲರ ಪ್ರೀತಿ, ವಿಶ್ವಾಸಗಳಿಸಿದ್ದ ಸ್ನೇಹಜೀವಿ ಆರ್.ವಿ.ದೇವರಾಜ್ : ಚಲುವರಾಯಸ್ವಾಮಿ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment