Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಸೈಬರ್ ಅಪರಾಧ:ಸಿಐಡಿಗೆ ಹಸ್ತಾಂತರಿಸಿದ ದಾವಣಗೆರೆ ಎಸ್ಪಿ

    3 weeks ago

    ದಾವಣಗೆರೆ.ಡಿ.20: ಕಳೆದ ಎರಡು ತಿಂಗಳ ಹಿಂದೆ ನಗರದ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿದ್ದ 150 ಕೋಟಿ ರೂ ಮೌಲ್ಯದ ಭಾರೀ ಸೈಬರ್ ವಂಚನೆ ಪ್ರಕರಣ ಗಂಭೀರತೆಯನ್ನು ಗಮನಿಸಿ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಒಂದೇ ತಿಂಗಳಲ್ಲಿ ಆರೋಪಿಯ ಖಾತೆಗೆ 150 ಕೋಟಿ ರೂ ವರ್ಗಾವಣೆ ಆಗಿದ್ದ ಪ್ರಕರಣದ ಜಾಡು ಹಿಡಿದು ಹೊರಟಿದ್ದ ದಾವಣಗೆರೆ ಸೈಬರ್ ಅಪರಾಧ ತಡೆ ಪೊಲೀಸರಿಗೆ ಇದೀಗ ಈ ಪ್ರಕರಣ ದೇಶವ್ಯಾಪಿ ಹಬ್ಬಿರುವ ಮಹತ್ವದ ಸುಳಿವು ದೊರೆತಿದೆ. […]

    ದಾವಣಗೆರೆ.ಡಿ.20: ಕಳೆದ ಎರಡು ತಿಂಗಳ ಹಿಂದೆ ನಗರದ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿದ್ದ 150 ಕೋಟಿ ರೂ ಮೌಲ್ಯದ ಭಾರೀ ಸೈಬರ್ ವಂಚನೆ ಪ್ರಕರಣ ಗಂಭೀರತೆಯನ್ನು ಗಮನಿಸಿ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
    ಒಂದೇ ತಿಂಗಳಲ್ಲಿ ಆರೋಪಿಯ ಖಾತೆಗೆ 150 ಕೋಟಿ ರೂ ವರ್ಗಾವಣೆ ಆಗಿದ್ದ ಪ್ರಕರಣದ ಜಾಡು ಹಿಡಿದು ಹೊರಟಿದ್ದ ದಾವಣಗೆರೆ ಸೈಬರ್ ಅಪರಾಧ ತಡೆ ಪೊಲೀಸರಿಗೆ ಇದೀಗ ಈ ಪ್ರಕರಣ ದೇಶವ್ಯಾಪಿ ಹಬ್ಬಿರುವ ಮಹತ್ವದ ಸುಳಿವು ದೊರೆತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ಎಸ್ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
    ಆರಂಭದಲ್ಲಿ ಕೇವಲ 150 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದ್ದ ಈ ಪ್ರಕರಣದಲ್ಲಿ ಇದೀಗ 1,000 ಕೋಟಿ ರೂಪಾಯಿಗೂ ಅಧಿಕ ಹಣ ವಹಿವಾಟು ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಪ್ರಕರಣ ರಾಜ್ಯದ ದೊಡ್ಡ ಸೈಬರ್ ಅಪರಾಧಗಳ ಪೈಕಿ ಒಂದಾಗಿ ಗುರುತಿಸಲಾಗಿದೆ.
    ಆಗಸ್ಟ್ 29ರಂದು ದಾವಣಗೆರೆಯ ಪ್ರಮೋದ್ ಎಂಬಾತ 52 ಲಕ್ಷ ರೂ. ಸೈಬರ್ ವಂಚನೆಗೆ ಒಳಗಾಗಿದ್ದಾಗಿ ದೂರು ನೀಡಿದ ಬಳಿಕ ತನಿಖೆ ಆರಂಭಗೊಂಡಿತ್ತು. ಈ ಸಂಬಂಧ ಬೇಲೂರು ಮೂಲದ ಸೈಯದ್ ಅರ್ಫಾತ್ ಹಾಗೂ ಗುಜರಾತ್‌ನ ಅಹಮದಾಬಾದ್ ಮೂಲದ ಸಂಜಯ್ ಕುಂಟ್ ಅವರನ್ನು ಪೊಲೀಸರು ಬಂಧಿಸಿದ್ದರು. ತನಿಖೆಯ ವೇಳೆ ಉದ್ಯಮವೇ ಇಲ್ಲದೇ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಕರೆಂಟ್ ಅಕೌಂಟ್ ತೆರೆಯಿಸಿ ಅಕೌಂಟ್‌ಗಳನ್ನೆ ಮಾರಾಟ ಮಾಡುತ್ತಿದ್ದ ಜಾಲ ಬಯಲಾಗಿತ್ತು.
    ಆರೋಪಿಗಳ ಖಾತೆಗಳಿಗೆ ದೇಶದ ವಿವಿಧ ಭಾಗಗಳಿಂದ ಹಾಗೂ ದುಬೈನಿಂದಲೂ ಅಪಾರ ಪ್ರಮಾಣದ ಹಣ ಜಮೆಯಾಗಿದ್ದು, ಈ ಹಣ ಆನ್‌ಲೈನ್ ಗೇಮಿಂಗ್, ಗ್ಯಾಂಬ್ಲಿAಗ್ ಮತ್ತು ನಕಲಿ ಟ್ರೇಡಿಂಗ್ ಮೂಲಕ ಸಂಗ್ರಹವಾಗಿರುವ ಶಂಕೆ ವ್ಯಕ್ತವಾಗಿದೆ.
    ತನಿಖೆಯಲ್ಲಿ ದೂರುದಾರ ಪ್ರಮೋದ್ ಕೂಡ ಈ ವಂಚನೆ ಜಾಲದ ಭಾಗವಾಗಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ.
    Click here to Read More
    Previous Article
    ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ : ಕಾಂಗ್ರೆಸ್ ಮುಖಂಡ ಸೇರಿ 4 ಮಂದಿ ಬಂಧನ
    Next Article
    ಸ್ವತ್ತು ಕಳವು ಪ್ರಕರಣ: 20.38 ಕೋಟಿ ರೂ ಮೌಲ್ಯದ ಸ್ವತ್ತು ಮಾಲೀಕರಿಗೆ ವಿತರಣೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment