Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ನಿಶ್ಚಿತಾರ್ಥದವಾಗಿದ್ದ ಯುವತಿಗೆ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ ಯುವಕನ ಹತ್ಯೆ

    2 weeks ago

    ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿ ಮೆಸೇಜ್ ಮಾಡಿದ ಕಾರಣಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ...

    The post ನಿಶ್ಚಿತಾರ್ಥದವಾಗಿದ್ದ ಯುವತಿಗೆ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ ಯುವಕನ ಹತ್ಯೆ first appeared on Udupi Times.



    ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿ ಮೆಸೇಜ್ ಮಾಡಿದ ಕಾರಣಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

    ಉಡೇವಾ ಮೂಲದ ಮಂಜುನಾಥ್ (28) ಕೊಲೆಯಾದ ಯುವಕ. ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕ ವೇಣು ಮತ್ತು ಕೊಲೆ ಆರೋಪಿಗಳು ಎಂದು ಹೇಳಲಾಗಿದೆ.

    ವೇಣುವಿನ ಜೊತೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಗೆ ಮಂಜುನಾಥ್ ಹುಟ್ಟುಹಬ್ಬದ ಶುಭಾಶಯ ಕೋರಿ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಮಾಡಿದ್ದನೆನ್ನಲಾಗಿದೆ. ಈ ವಿಚಾರವಾಗಿ ವೇಣು ಮತ್ತು ಮಂಜುನಾಥ್ ಮಧ್ಯೆ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ಗಲಾಟೆ ನಡೆದಿದೆ. ಇದು ಅತಿರೇಕಕ್ಕೆ ತಿರುಗಿದ್ದು, ವೇಣು ಹಾಗೂ ಸ್ನೇಹಿತರು ಮಂಜುನಾಥ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

    ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

    ಈ ಬಗ್ಗೆ ತರೀಕೆರೆ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    The post ನಿಶ್ಚಿತಾರ್ಥದವಾಗಿದ್ದ ಯುವತಿಗೆ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ ಯುವಕನ ಹತ್ಯೆ first appeared on Udupi Times.

    Click here to Read More
    Previous Article
    ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್- ಗುಂಟೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಮೃತ್ಯು
    Next Article
    ದಿನ ಭವಿಷ್ಯ | ಜನವರಿ 02 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ಶುಭ ಸುದ್ದಿ, ಹೊಸ ವಾಹನ ಯೋಗ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment