Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಸಿಎಂ ಆಗಿ ಸುದೀರ್ಘ ಆಡಳಿತ | ಸಿದ್ದರಾಮಯ್ಯ ಅಭಿಮಾನಿಗಳಿಂದ ಸಂಭ್ರಮಾಚರಣೆ

    1 week ago

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ ೬ ಕ್ಕೆ ರಾಜ್ಯದಲ್ಲಿ ಸುದೀರ್ಘ ಅವಧಿ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿರುವ ಹಿನ್ನೆಲೆಯಲ್ಲಿ ಜನವರಿ ೭ ರಂದು ಮಂಡ್ಯ ತಾಲೂಕಿನ ಕರಡಿಕೊಪ್ಪಲು ಗ್ರಾಮದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿಂದ ಸಂಭ್ರಮಾಚರಣೆ ಏರ್ಪಡಿಸಲಾಗಿದೆ ಎಂದು ಕೆಪಿಸಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಸಿ.ಪುಟ್ಟಸ್ವಾಮಿಗೌಡ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ದಿ.ದೇವರಾಜು ಅರಸು ಅವರ ದಾಖಲೆ ಸರಿಗಟ್ಟಿ, ಹೊಸ ದಾಖಲೆ ಬರೆಯಲಿದ್ದಾರೆ. ಈ ಸಂಭ್ರಮ ವಿಶೇಷ ದಿನವನ್ನು ಜನವರಿ ೭ ರ […]

    The post ಸಿಎಂ ಆಗಿ ಸುದೀರ್ಘ ಆಡಳಿತ | ಸಿದ್ದರಾಮಯ್ಯ ಅಭಿಮಾನಿಗಳಿಂದ ಸಂಭ್ರಮಾಚರಣೆ appeared first on nudikarnataka.



    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ ೬ ಕ್ಕೆ ರಾಜ್ಯದಲ್ಲಿ ಸುದೀರ್ಘ ಅವಧಿ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿರುವ ಹಿನ್ನೆಲೆಯಲ್ಲಿ ಜನವರಿ ೭ ರಂದು ಮಂಡ್ಯ ತಾಲೂಕಿನ ಕರಡಿಕೊಪ್ಪಲು ಗ್ರಾಮದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿಂದ ಸಂಭ್ರಮಾಚರಣೆ ಏರ್ಪಡಿಸಲಾಗಿದೆ ಎಂದು ಕೆಪಿಸಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಸಿ.ಪುಟ್ಟಸ್ವಾಮಿಗೌಡ ತಿಳಿಸಿದರು.

    ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ದಿ.ದೇವರಾಜು ಅರಸು ಅವರ ದಾಖಲೆ ಸರಿಗಟ್ಟಿ, ಹೊಸ ದಾಖಲೆ ಬರೆಯಲಿದ್ದಾರೆ. ಈ ಸಂಭ್ರಮ ವಿಶೇಷ ದಿನವನ್ನು ಜನವರಿ ೭ ರ ಬುಧವಾರದಂದು ಸಂಜೆ ೬ ಗಂಟೆಗೆ ಮಂಡ್ಯ ತಾಲೂಕಿನ ಕರಡಿಕೊಪ್ಪಲು ಗ್ರಾಮದಲ್ಲಿ ಆಚರಿಸಿ ಗ್ರಾಮಸ್ಥರಿಗೆ ಸಿಹಿ ಹಂಚಿ ಸಂಭ್ರಮಿಸಿ ಭೋಜನ ಕೂಟ ಕಾರ್ಯಕ್ರಮ ಏರ್ಪಡಿಸುತ್ತಿದ್ದೇವೆ ಎಂದು ತಿಳಿಸಿದರು.

    ಈ ಸಂಭ್ರಮ ಕಾರ್ಯಕ್ರಮಕ್ಕೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗಣಿಗ, ಡಾ.ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ದಡದಪುರ ಶಿವಣ್ಣ, ಮೈಸೂರು-ಚಾಮರಾಜನಗರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮಿಗೌಡ, ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಮಂಡ್ಯ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಮನ್‌ಮುಲ್ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ, ಮೈಸೂರು ಮಹಾನಗರ ಪಾಲಿಕೆ ಸದಸ್ಯ ಜೆ.ಗೋಪಿ, ಹೊಳೆನರಸೀಪುರ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಮಂಜೇಗೌಡ, ಚಲನಚಿತ್ರ ನಿರ್ಮಾಪಕ ಮಾವಿನಕೆರೆ ಸುರೇಶ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರುಗಳು ಭಾಗವಹಿಸುತ್ತಿದ್ದು ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

    ಗೋಷ್ಠಿಯಲ್ಲಿ ಮುಖಂಡರಾದ ಕೆಂಚಪ್ಪ,ಅಶೋಕ್ ಇದ್ದರು.

    The post ಸಿಎಂ ಆಗಿ ಸುದೀರ್ಘ ಆಡಳಿತ | ಸಿದ್ದರಾಮಯ್ಯ ಅಭಿಮಾನಿಗಳಿಂದ ಸಂಭ್ರಮಾಚರಣೆ appeared first on nudikarnataka.

    Click here to Read More
    Previous Article
    ಮಂಡ್ಯ : ನಾಳೆ ಆಲಕೆರೆಯಲ್ಲಿ ಶಾಸಕರಿಂದ ಜನತಾ ದರ್ಶನ
    Next Article
    ಸ್ವಾಭಿಮಾನದ ಬದುಕು ಮತ್ತು ಸಮಾಜದಲ್ಲಿ ಬದಲಾವಣೆ ತರಲು ವಿದ್ಯಾವಂತರಾಗಲೇಬೇಕು- ಸಿಎಂ ಸಿದ್ದರಾಮಯ್ಯ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment