Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅರಿವಿನ ಶಿಕ್ಷಣವನ್ನು ನಿರಾಕರಿಸಲ್ಪಟ್ಟ ಸಮುದಾಯದವರ ಬಾಳಿನ ಬೆಳಕು ಸಾವಿತ್ರಿ ಬಾಯಿ ಫುಲೆ: ಡಾ. ಮಹೇಶ್‍ ಕುಮಾರ್‍ ಕೆ.ಇ

    Source: nammaudupi

    03 Feb 2026, 12:10 PM
    1 month ago

    ಮಲ್ಪೆ, ಜ.5: ಸಾಮಾಜಿಕವಾಗಿ ಅರಿವಿನ ಶಿಕ್ಷಣವನ್ನೇ ನಿರಾಕರಿಸಲ್ಪಟ್ಟ ಸಮುದಾಯಕ್ಕೆ ಶಿಕ್ಷಣ ಮುಖೇನ ಅರಿವಿನ ಬೆಳಕನ್ನು ಮೂಡಿಸಿದಂತಹ ಭಾರತದ ಮೊಟ್ಟಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ. ಮಹಿಳೆಯರ, ದೀನ ದಲಿತರ ಬದುಕಿನ ಸುಧಾರಣೆಗಾಗಿ ಅವರು ನಡೆಸಿದ ಹೋರಾಟದ ಬದುಕಿನಿಂದ ಕ್ರಾಂತಿಕಾರಿ ಭಾರತದ ಸಮಾಜ ಸುಧಾರಕಿಯಾಗಿ, ಕ್ರಾಂತಿ ಜ್ಯೋತಿಯಾಗಿ ಗುರುತಿಸಿಕೊಂಡವರು. ತಮ್ಮ ಜೀವಿತದುದ್ದಕ್ಕೂ ಲಿಂಗ ರಾಜಕಾರಣ ಜಾತಿ ರಾಜಕಾರಣದ ವಿರುದ್ಧ ಹೋರಾಡಿ ಶಿಕ್ಷಣ ಮುಖೇನ ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸಿದ ಜ್ಯೋತಿಬಾಯಿ ಫುಲೆಯವರ ಸರಳ ಸಾತ್ವಿಕ ಬದುಕು ಎಲ್ಲರಿಗೂ ಅನುಕರಣಿಯವಾದದ್ದು ಎಂದು ಇತಿಹಾಸ […]

    The post ಅರಿವಿನ ಶಿಕ್ಷಣವನ್ನು ನಿರಾಕರಿಸಲ್ಪಟ್ಟ ಸಮುದಾಯದವರ ಬಾಳಿನ ಬೆಳಕು ಸಾವಿತ್ರಿ ಬಾಯಿ ಫುಲೆ: ಡಾ. ಮಹೇಶ್‍ ಕುಮಾರ್‍ ಕೆ.ಇ appeared first on Namma Udupi Bulletin.



    ಮಲ್ಪೆ, ಜ.5: ಸಾಮಾಜಿಕವಾಗಿ ಅರಿವಿನ ಶಿಕ್ಷಣವನ್ನೇ ನಿರಾಕರಿಸಲ್ಪಟ್ಟ ಸಮುದಾಯಕ್ಕೆ ಶಿಕ್ಷಣ ಮುಖೇನ ಅರಿವಿನ ಬೆಳಕನ್ನು ಮೂಡಿಸಿದಂತಹ ಭಾರತದ ಮೊಟ್ಟಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ. ಮಹಿಳೆಯರ, ದೀನ ದಲಿತರ ಬದುಕಿನ ಸುಧಾರಣೆಗಾಗಿ ಅವರು ನಡೆಸಿದ ಹೋರಾಟದ ಬದುಕಿನಿಂದ ಕ್ರಾಂತಿಕಾರಿ ಭಾರತದ ಸಮಾಜ ಸುಧಾರಕಿಯಾಗಿ, ಕ್ರಾಂತಿ ಜ್ಯೋತಿಯಾಗಿ ಗುರುತಿಸಿಕೊಂಡವರು. ತಮ್ಮ ಜೀವಿತದುದ್ದಕ್ಕೂ ಲಿಂಗ ರಾಜಕಾರಣ ಜಾತಿ ರಾಜಕಾರಣದ ವಿರುದ್ಧ ಹೋರಾಡಿ ಶಿಕ್ಷಣ ಮುಖೇನ ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸಿದ ಜ್ಯೋತಿಬಾಯಿ ಫುಲೆಯವರ ಸರಳ ಸಾತ್ವಿಕ ಬದುಕು ಎಲ್ಲರಿಗೂ ಅನುಕರಣಿಯವಾದದ್ದು ಎಂದು ಇತಿಹಾಸ ಉಪನ್ಯಾಸಕರಾದ ಡಾ. ಮಹೇಶ್‍ ಕುಮಾರ್‍ ಕೆ.ಇ ಹೇಳಿದರು.

    ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕನ್ನಡ ವಿಭಾಗದ ಆಶ್ರಯಲ್ಲಿ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಸಾವಿತ್ರಿಬಾಯಿ ಫುಲೆಯವರ ಜನ್ಮದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಾವಿತ್ರಿಬಾಯಿ ಫುಲೆಯವರ ಸಮಕಾಲೀನರಾಗಿದ್ದ ಭಾರತದ ಮೊಟ್ಟ ಮೊದಲ ಮುಸ್ಲಿಂ ಶಿಕ್ಷಕಿ ಫಾತಿಮ ಶೇಖ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಗೌರವಿಸಲಾಯಿತು.

    ಕನ್ನಡ ವಿಭಾಗದ ವಿದ್ಯಾರ್ಥಿಗಳಾದ ಕೀರ್ತನಾ ಶೆಟ್ಟಿ, ಶಿವಾನಿ ಶೆಟ್ಟಿ, ಮಂಜು, ಪ್ರವೀಣ್ ಸಾವಿತ್ರಿಬಾಯಿ ಫುಲೆಯವರ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ವಹಿಸಿದ್ದರು. ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್‌ ಭಟ್‌, ಐ.ಕ್ಯೂ.ಎ.ಸಿ ಸಂಚಾಲಕ ಡಾ. ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಂದೇಶ್‌ ಎಂ.ವಿ, ಉಪನ್ಯಾಸಕರಾದ ಶರಿತಾ, ಭಾರತಿ, ಬಾಬು ಮುಂತಾದವರು ಉಪಸ್ಥಿತರಿದ್ದರು. ಅನುಷಾ ಮತ್ತು ಬಳಗ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ರತ್ನಮಾಲಾ ಸ್ವಾಗತಿಸಿ ಪ್ರಸ್ತಾವನೆಗೈದರು. ಜ್ಯೋತಿ ಎಂ. ವಂದಿಸಿದರು. ಅರ್ಚನಾ ನಿರೂಪಿಸಿದರು.

    The post ಅರಿವಿನ ಶಿಕ್ಷಣವನ್ನು ನಿರಾಕರಿಸಲ್ಪಟ್ಟ ಸಮುದಾಯದವರ ಬಾಳಿನ ಬೆಳಕು ಸಾವಿತ್ರಿ ಬಾಯಿ ಫುಲೆ: ಡಾ. ಮಹೇಶ್‍ ಕುಮಾರ್‍ ಕೆ.ಇ appeared first on Namma Udupi Bulletin.

    Click here to Read More
    Previous Article
    ಉದ್ಯೋಗಾಧರಿತ ಶಿಕ್ಷಣಕ್ಕೆ ಸರ್ಕಾರದಿಂದ ಹೆಚ್ಚು ಒತ್ತು-ಸಚಿವ ಡಾ: ಎಂ.ಸಿ ಸುಧಾಕರ್
    Next Article
    ಉಡುಪಿ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ: ಸುತ್ತುಪೌಳಿಯಲ್ಲಿನ ದಾರಂದ ಮುಹೂರ್ತ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment