Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಉದ್ಯಾವರ: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

    1 week ago

    ಉದ್ಯಾವರ, ಜ.5: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 60 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿತ್ರೋಡಿ ಪ್ರವೀಣ್ ಮನೆಯಿಂದ ರಮೇಶ್ ಕುಮಾರ್ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ – 10 ಲಕ್ಷ, ಅಂಕುದ್ರು ಮುಖ್ಯ ರಸ್ತೆ ಕಾಂಕ್ರೀಟೀಕರಣ – 10 ಲಕ್ಷ, ಸಂಪಿಗೆನಗರ ಮಹಾಕಾಳಿ 1ನೇ ಅಡ್ಡ ರಸ್ತೆ ಅಭಿವೃದ್ಧಿ – 10 ಲಕ್ಷ, ಕೇದಾರ್ […]

    The post ಉದ್ಯಾವರ: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ appeared first on Namma Udupi Bulletin.



    ಉದ್ಯಾವರ, ಜ.5: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 60 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

    ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿತ್ರೋಡಿ ಪ್ರವೀಣ್ ಮನೆಯಿಂದ ರಮೇಶ್ ಕುಮಾರ್ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ – 10 ಲಕ್ಷ, ಅಂಕುದ್ರು ಮುಖ್ಯ ರಸ್ತೆ ಕಾಂಕ್ರೀಟೀಕರಣ – 10 ಲಕ್ಷ, ಸಂಪಿಗೆನಗರ ಮಹಾಕಾಳಿ 1ನೇ ಅಡ್ಡ ರಸ್ತೆ ಅಭಿವೃದ್ಧಿ – 10 ಲಕ್ಷ, ಕೇದಾರ್ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಳಿ ರಸ್ತೆ ಅಭಿವೃದ್ಧಿಗೆ – 10 ಲಕ್ಷ, ರಾಜಾರಾಮ್ ಭಟ್ ಮನೆ ಬಳಿ ರಸ್ತೆ ಅಭಿವೃದ್ಧಿ – 10 ಲಕ್ಷ, ಪಿತ್ರೋಡಿ ನೀಲಾಧರ್ ಸಾಲಿಯಾನ್ ಮತ್ತು ಸುಗಂಧಿ ಶೆಟ್ಟಿ ಮನೆ ಬಳಿ ರಸ್ತೆ ಕಾಂಕ್ರೀಟೀಕರಣ – 10 ಲಕ್ಷ ಸೇರಿದಂತೆ ಒಟ್ಟು 60 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

    ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಸದಸ್ಯರಾದ ರಾಧಾಕೃಷ್ಣ ಶ್ರೀಯಾನ್, ಜಿತೇಂದ್ರ ಶೆಟ್ಟಿ, ಯೋಗೀಶ್ ಕೋಟ್ಯಾನ್, ಸಚಿನ್ ಪಿತ್ರೋಡಿ, ರಮಾನಂದ ಸೆರ್ವೇಗಾರ್, ಮಿಥೇಶ್, ಚೇತನ್, ವೀಣಾ, ಸರಿತಾ, ರೇಖಾ, ಪ್ರಮೀಳಾ ಹಾಗೂ ಸ್ಥಳೀಯ ಪ್ರಮುಖರಾದ ವಿಜಯ್ ಕುಮಾರ್ ಉದ್ಯಾವರ, ಸಂತೋಷ್ ಬೊಳ್ಜೆ ಮುಂತಾದವರು ಉಪಸ್ಥಿತರಿದ್ದರು.

    The post ಉದ್ಯಾವರ: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ appeared first on Namma Udupi Bulletin.

    Click here to Read More
    Previous Article
    ಭತ್ತ ಉತ್ಪಾದನೆಯಲ್ಲಿ ವಿಶ್ವದ ಅತಿದೊಡ್ಡ ರಾಷ್ಟ್ರವಾಗಿ ಭಾರತ: ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
    Next Article
    ಗೃಹಲಕ್ಷ್ಮಿ ಫಲಾನುಭವಿಗಳು ಬ್ಯಾಂಕ್ ಖಾತೆಯನ್ನು ಆಧಾರ್ ಸೀಡಿಂಗ್ ಮತ್ತು ಇ-ಕೆ.ವೈ.ಸಿ ಮಾಡಿಸಿ : ಚಿಕ್ಕಲಿಂಗಯ್ಯ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment