Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಸಣ್ಣ, ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ : ಡಾ.ಕುಮಾರ

    Source: Nudikarnataka

    03 Feb 2026, 04:55 PM
    1 month ago

    ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಹೇಳಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಾಗಮಂಗಲ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲು ಭೂಮಿಯನ್ನು ಗುರುತಿಸಿ ಎಂದು ಹೇಳಿದರು. ಪಾಂಡವಪುರ ತಾಲ್ಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲು […]

    The post ಮಂಡ್ಯ | ಸಣ್ಣ, ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ : ಡಾ.ಕುಮಾರ appeared first on nudikarnataka.



    ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಹೇಳಿದರು.

    ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಾಗಮಂಗಲ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲು ಭೂಮಿಯನ್ನು ಗುರುತಿಸಿ ಎಂದು ಹೇಳಿದರು.

    ಪಾಂಡವಪುರ ತಾಲ್ಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲು ಕಂದಾಯ ಇಲಾಖೆಯಲ್ಲಿ ಲಭ್ಯವಿರುವ ಭೂ ಜಾಗವನ್ನು ಕೈಗಾರಿಕಾ ಇಲಾಖೆಗೆ ಹಸ್ತಾಂತರಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

    ಮಳವಳ್ಳಿ ತಾಲೂಕಿನಲ್ಲಿ 563 ಎಕ್ಕರೆ ಜಾಗವನ್ನು ಕೆ.ಡಿ.ಬಿ ವಿಶೇಷ ಭೂಸ್ವಾಧೀನ ಅಧಿಕಾರಿಗಳು ಗುರುತಿಸಿ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳು ಹಾಗೂ ಕೈಗಾರಿಕಾ ಅಸಾಹಾತುಗಳು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ದಿನೇಶ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್ ಸೇರಿದಂತೆ ಇನ್ನಿತರರು ಇದ್ದರು.

    The post ಮಂಡ್ಯ | ಸಣ್ಣ, ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ : ಡಾ.ಕುಮಾರ appeared first on nudikarnataka.

    Click here to Read More
    Previous Article
    ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಉಪನ್ಯಾಸಕನ ಬಂಧನ
    Next Article
    ಮಂಡ್ಯ ಜಿಲ್ಲೆಯಲ್ಲಿ ಪ್ರಾಚೀನ ಕಾಲದ ವೀರಗಲ್ಲು ಶಾಸನ ಪತ್ತೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment