Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮನೆಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ : ಶಾಸಕ ರವಿಕುಮಾರ್

    1 week ago

    ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 53 ಇಲಾಖೆಯ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು ಸಲ್ಲಿಸಬಹುದಾಗಿದೆ ಎಂದ ಅವರು, ಸ್ವತಃ ಅರ್ಜಿ ಸ್ವೀಕರಿಸಿ ಸಮಸ್ಯೆಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟರು. ಅಭಿವೃದ್ಧಿ ಕೆಲಸವೇ ನಮ್ಮ ಗುರಿ, ಅಪಪ್ರಚಾರಕ್ಕೆ ಕಿವಿಕೊಡದಿರಿ. ನಿಮ್ಮ ಕೆಲಸಗಳು ಸುಗಮವಾಗಿ ಆಗಬೇಕು. ನಿಮ್ಮ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತರುತ್ತೇವೆ, […]

    The post ಮನೆಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ : ಶಾಸಕ ರವಿಕುಮಾರ್ appeared first on nudikarnataka.



    ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು.

    ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 53 ಇಲಾಖೆಯ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು ಸಲ್ಲಿಸಬಹುದಾಗಿದೆ ಎಂದ ಅವರು, ಸ್ವತಃ ಅರ್ಜಿ ಸ್ವೀಕರಿಸಿ ಸಮಸ್ಯೆಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

    ಅಭಿವೃದ್ಧಿ ಕೆಲಸವೇ ನಮ್ಮ ಗುರಿ, ಅಪಪ್ರಚಾರಕ್ಕೆ ಕಿವಿಕೊಡದಿರಿ. ನಿಮ್ಮ ಕೆಲಸಗಳು ಸುಗಮವಾಗಿ ಆಗಬೇಕು.
    ನಿಮ್ಮ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತರುತ್ತೇವೆ, ಉಚಿತ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದೆ‌ ಸದುಪಯೋಗ ಪಡಿಸಿಕೊಳ್ಳಿ, ಇತಿಹಾಸದಲ್ಲಿ 35 ಕೋಟಿ ಹಣ ಆಲಕೆರೆ ಗ್ರಾ.ಪಂ.ವ್ಯಾಪ್ತಿಗೆ ಕೊಡಲಾಗಿದೆ ಎಂದರು.

    ನಾಲೆ,ರಸ್ತೆ ಅಭಿವೃದ್ಧಿ, ಗ್ರಾಮಾಭಿವೃದ್ದಿ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಆಲಕೆರೆ ಗ್ರಾಮಕ್ಕೆ 8 ಕೋಟಿ ಬಿಡುಗಡೆ ಮಾಡಲಾಗಿದೆ. ನಾನು ಜಾತಿ, ಪಕ್ಷ ಬೇಧ ಮಾಡಲ್ಲ, ಅಭಿವೃದ್ಧಿ ಕೆಲಸ ಆಗಬೇಕು ಅಷ್ಟೆ. ಕೆಲವು RTC ಸಮಸ್ಯೆ ಇದೆ ಇದಕ್ಕೆ ಶೀಘ್ರವಾಗಿ ಬಗೆಹರಿಸುತ್ತೇವೆ ಎಂದು ಸೂಚಿಸಿದರು.

    ರಾಜ್ಯ ನೋಡುವ ರೀತಿ ಆಲಕೆರೆ ಗ್ರಾಮದಲ್ಲಿ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನಡೆದಿದೆ. ನಾವು ಅಭಿವೃದ್ಧಿ ಕೆಲಸ ಮಾಡ್ತಿರೋದು ಬೇರೆಯವರ ಅಪಪ್ರಚಾರಕ್ಕೆ ಕಿವಿ ಕೊಡಬೇಡಿ. ಮೊದಲು ನೀವೆಲ್ಲರು ಭ್ರಮೆಯಲ್ಲಿ ಓಟ್ ಹಾಕ್ತಿದ್ರಿ. ನಿಮ್ಮ ಆಶೀರ್ವಾದ ಹೀಗೆ ಇರಲಿ ಮುಂದೆ ಮತಷ್ಟು ಅಭಿವೃದ್ಧಿ ಕಾರ್ಯ ಮಾಡಲು ಶ್ರಮಿಸುತ್ತೇನೆ.
    ನಿಮ್ಮೆಲ್ಲ ಸಮಸ್ಯೆಗಳನ್ನು ಪರಿಹರಿಸಲು ನಾವು ಮಾಡ್ತೇವೆ ಎಂದರು.

    ಗ್ರಾಮಕ್ಕೆ ಆಗಮಿಸಿದ ಶಾಸಕರನ್ನು ಅದ್ದೂರಿಯಾಗಿ ಸ್ವಾಗತಿಸಿದ ಜನರು, ಪಟಾಕಿ ಸಿಡಿಸಿ, ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಜನತಾ ದರ್ಶನ ಕಾರ್ಯಕ್ರಮದಲ್ಲಿ ಇಲಾಖಾವಾರು ಕೌಂಟರ್‌ಗಳನ್ನ ತೆರೆದು ಅರ್ಜಿ ಸ್ವೀಕಾರ ಮಾಡಲಾಯಿತು.ವಿವಿಧ ಸಮಸ್ಯೆಗಳನ್ನು ಹೊತ್ತು ತಂದ ಜನರು ಅರ್ಜಿ ಸ್ವೀಕಾರ ಮಾಡಲಾಯಿತು.

    ಕಾರ್ಯಕ್ರಮದಲ್ಲಿ ಎಸಿ ಶಿವಮೂರ್ತಿ, ತಹಶೀಲ್ದಾರ್ ವಿಶ್ವನಾಥ್ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

    The post ಮನೆಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ : ಶಾಸಕ ರವಿಕುಮಾರ್ appeared first on nudikarnataka.

    Click here to Read More
    Previous Article
    ಉಡುಪಿ ಪರ್ಯಾಯ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ
    Next Article
    ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿದ ದುಷ್ಕರ್ಮಿಗಳು

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment