Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮುಖ್ಯಮಂತ್ರಿಯಾಗಿ ದಾಖಲೆ | ಅಭಿಮಾನಿಗಳಿಂದ ಭರ್ಜರಿ ಬಾಡೂಟ : ಸಿದ್ದರಾಮಯ್ಯ ಫುಲ್ ಖುಷ್

    1 week ago

    ಮುಖ್ಯಮಂತ್ರಿಯಾಗಿ ಅರಸು ದಾಖಲೆಯನ್ನು ಸಿದ್ದರಾಮಯ್ಯ ಸರಿಗಟ್ಟಿದ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಅಭಿಮಾನಿಗಳು ಭರ್ಜರಿ ಬಾಡೂಟ ಬಡಿಸುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅತೀವ ಸಂತಸ ವ್ಯಕ್ತಪಡಿಸಿದ್ಧಾರೆ. ಹೇಳಿ ಕೇಳಿ ಸಿದ್ದರಾಮಯ್ಯ ಅವರು ಮಾಂಸಾಹಾರ ಪ್ರಿಯರು, ಅದರಲ್ಲೂ ನಾಟಿ ಕೋಳಿ ಸಾರು, ಮುದ್ದೆ ಎಂದರೆ ಅವರಿಗೆ ಬಹಳ ಪ್ರಿಯವಾದದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನ ಸಿದ್ದರಾಮಯ್ಯ ಅವರ ನಿವಾಸದ ಬಳಿ ಅಭಿಮಾನಿಗಳು ನಾಟಿಕೋಳಿ ಫಲಾವ್ ವಿತರಿಸಿದರು. ಇದಲ್ಲದೇ ನೆಲಮಂಗಲದಲ್ಲಿ ನೂರಾರು ಜನರಿಗೆ ನಾಟಿಕೋಳಿ ಬಾಡೂಟವನ್ನು ಆಯೋಜಿಸಲಾಗಿತ್ತು. ಈ ಬಗ್ಗೆ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಮಾಜಿ ಮುಖ್ಯಮಂತ್ರಿ […]

    The post ಮುಖ್ಯಮಂತ್ರಿಯಾಗಿ ದಾಖಲೆ | ಅಭಿಮಾನಿಗಳಿಂದ ಭರ್ಜರಿ ಬಾಡೂಟ : ಸಿದ್ದರಾಮಯ್ಯ ಫುಲ್ ಖುಷ್ appeared first on nudikarnataka.



    ಮುಖ್ಯಮಂತ್ರಿಯಾಗಿ ಅರಸು ದಾಖಲೆಯನ್ನು ಸಿದ್ದರಾಮಯ್ಯ ಸರಿಗಟ್ಟಿದ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಅಭಿಮಾನಿಗಳು ಭರ್ಜರಿ ಬಾಡೂಟ ಬಡಿಸುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅತೀವ ಸಂತಸ ವ್ಯಕ್ತಪಡಿಸಿದ್ಧಾರೆ.

    ಹೇಳಿ ಕೇಳಿ ಸಿದ್ದರಾಮಯ್ಯ ಅವರು ಮಾಂಸಾಹಾರ ಪ್ರಿಯರು, ಅದರಲ್ಲೂ ನಾಟಿ ಕೋಳಿ ಸಾರು, ಮುದ್ದೆ ಎಂದರೆ ಅವರಿಗೆ ಬಹಳ ಪ್ರಿಯವಾದದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನ ಸಿದ್ದರಾಮಯ್ಯ ಅವರ ನಿವಾಸದ ಬಳಿ ಅಭಿಮಾನಿಗಳು ನಾಟಿಕೋಳಿ ಫಲಾವ್ ವಿತರಿಸಿದರು. ಇದಲ್ಲದೇ ನೆಲಮಂಗಲದಲ್ಲಿ ನೂರಾರು ಜನರಿಗೆ ನಾಟಿಕೋಳಿ ಬಾಡೂಟವನ್ನು ಆಯೋಜಿಸಲಾಗಿತ್ತು.

    ಈ ಬಗ್ಗೆ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ ಎಂದಿದ್ದಾರೆ.

    ಅಲ್ಲದೆ’ ನನ್ನ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿದ ಸುದ್ದಿ ಗಮನಿಸಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದಿದ್ದಾರೆ.

    ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದೇವೆ. ಆದರೆ ಕಾಲಘಟ್ಟ ಬೇರೆ ಬೇರೆಯಾಗಿದೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದು ತಿಳಿಸಿದ್ದಾರೆ.

    The post ಮುಖ್ಯಮಂತ್ರಿಯಾಗಿ ದಾಖಲೆ | ಅಭಿಮಾನಿಗಳಿಂದ ಭರ್ಜರಿ ಬಾಡೂಟ : ಸಿದ್ದರಾಮಯ್ಯ ಫುಲ್ ಖುಷ್ appeared first on nudikarnataka.

    Click here to Read More
    Previous Article
    ಕೊಪ್ಪ: ನಾರ್ವೆ ಶ್ರೀ ಚಂಡಿಕೇಶ್ವರಿ ದೇವಾಲಯದಲ್ಲಿನ ಶಾಸನದ ಮರು ಅಧ್ಯಯನ
    Next Article
    ನಿಧಿಗಾಗಿ ಮಗು ಬಲಿ ಯತ್ನ ಪ್ರಕರಣ: ಇಬ್ಬರ ಬಂಧನ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment