Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಾದರ ಮಹಾಸಭಾ ಮಂಡ್ಯ ಜಿಲ್ಲಾ ಸಮಿತಿ ರಚನೆ : ಜಿಲ್ಲಾಧ್ಯಕ್ಷರಾಗಿ ಕಾಂತರಾಜ್ ನೇಮಕ

    1 week ago

    ಕರ್ನಾಟಕ ಮಾದರ ಮಹಾಸಭಾದ ಮಂಡ್ಯ ಜಿಲ್ಲಾ ಸಮಿತಿಯನ್ನು ನೇಮಕ ಮಾಡಿ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ಸಚಿವರೂ ಆದ ಕೆ.ಹೆಚ್. ಮುನಿಯಪ್ಪ ಆದೇಶ ಹೊರಡಿಸಿದ್ದಾರೆ. ಮಹಾಸಭಾದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ಆರ್.ಚಂದ್ರಶೇಖರ್ ನೇತೃತ್ವದಲ್ಲಿ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಜಿಲ್ಲಾ ಸಮಿತಿಗೆ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿತ್ತು, ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಸಮಿತಿಯ ವಿವಿಧ ಪದಾಧಿಕಾರಿಗಳು ಮಂಗಳವಾರ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಹೆಚ್.ಮುನಿಯಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು, ಅವರು ನಿರ್ಣಯಕ್ಕೆ ಸಹಿ […]

    The post ಮಾದರ ಮಹಾಸಭಾ ಮಂಡ್ಯ ಜಿಲ್ಲಾ ಸಮಿತಿ ರಚನೆ : ಜಿಲ್ಲಾಧ್ಯಕ್ಷರಾಗಿ ಕಾಂತರಾಜ್ ನೇಮಕ appeared first on nudikarnataka.



    ಕರ್ನಾಟಕ ಮಾದರ ಮಹಾಸಭಾದ ಮಂಡ್ಯ ಜಿಲ್ಲಾ ಸಮಿತಿಯನ್ನು ನೇಮಕ ಮಾಡಿ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ಸಚಿವರೂ ಆದ ಕೆ.ಹೆಚ್. ಮುನಿಯಪ್ಪ ಆದೇಶ ಹೊರಡಿಸಿದ್ದಾರೆ.

    ಮಹಾಸಭಾದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ಆರ್.ಚಂದ್ರಶೇಖರ್ ನೇತೃತ್ವದಲ್ಲಿ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಜಿಲ್ಲಾ ಸಮಿತಿಗೆ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿತ್ತು, ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಸಮಿತಿಯ ವಿವಿಧ ಪದಾಧಿಕಾರಿಗಳು ಮಂಗಳವಾರ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಹೆಚ್.ಮುನಿಯಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು, ಅವರು ನಿರ್ಣಯಕ್ಕೆ ಸಹಿ ಮಾಡುವ ಮೂಲಕ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ ಬಂದಿದೆ.

    ಮಾದರ ಮಹಾಸಭಾ ಮಂಡ್ಯ ಜಿಲ್ಲಾಧ್ಯಕ್ಷರಾಗಿ ಕೆ.ಆರ್.ಪೇಟೆ ತಾಲ್ಲೂಕು ಬಿ.ಬಿ.ಕಾವಲ್ ಗ್ರಾಮದ ಬಿ.ಎನ್.ಕಾಂತರಾಜು ನೇಮಕವಾಗಿದ್ದಾರೆ. ಉಪಾಧ್ಯಕ್ಷರಾಗಿ ಹುನಗನಹಳ್ಳಿ ಕಾಲೋನಿಯ ವಕೀಲ ಜಯರಾಮು, ಪ್ರಧಾನ ಕಾರ್ಯದರ್ಶಿಯಾಗಿ ಚಾಮನಹಳ್ಳಿ ಮಂಜು, ಖಚಾಂಚಿಯಾಗಿ ಅಲ್ಲಾಪಟ್ಟಣ ಗ್ರಾಮದ ಜಯಂತಿ ಆಯ್ಕೆಯಾಗಿದ್ಧಾರೆ.

    ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹೊಸಹೊಳಲು ಹೆಚ್.ಎಂ.ಪುಟ್ಟರಾಜು, ಕುಮಾರ ಬಾಳೆಹೊನ್ನಿಗ, ಹನಿಯಂಬಾಡಿ ಜಗದೀಶ್, ಗೋವಿಂದಯ್ಯ ಅಲ್ಪಹಳ್ಳಿ, ಕೃಷ್ಣಯ್ಯ ಇಜ್ವಲಘಟ್ಟ ಅವರು ಆಯ್ಕೆಯಾಗಿದ್ದಾರೆ.

    ವಿಶೇಷ ಆಹ್ವಾನಿತರಾಗಿ ಜಿ.ಪಂ. ಮಾಜಿ ಅಧ್ಯಕ್ಷ ಆರ್.ಕೆ.ಕುಮಾರ್, ಮಂಡ್ಯ ಜಿಲ್ಲಾ ಮಾದಿಗ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸಿ.ಕೆ.ಪಾಪಯ್ಯ, ಉದ್ಯಮಿ ಕುಚೇಲ, ಮುಖಂಡ ಬಿ.ಕೃಷ್ಣ ಗಾಂಧಿನಗರ, ಬೆಳ್ಳಾಳೆ ಜವರಾಯಿ ಹಾಗೂ ವಕೀಲ ಕನ್ನಲಿ ಸಿ. ಕೆಂಪಯ್ಯ ನೇಮಕವಾಗಿದ್ದಾರೆ.

    ಕರ್ನಾಟಕ ಮಾದರ ಮಹಾಸಭೆಯು 2015ರಲ್ಲಿ ಮಾದಿಗ ಸಮುದಾಯದ ಸಬಲೀಕರಣ ಮತ್ತು ಸರ್ವಾಂಗೀಣ ಅಭಿವೃದ್ಧಿ ಉದ್ದೇಶದಿಂದ ಸ್ಥಾಪಿತವಾಗಿದ್ದು, ಮಾದಿಗ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಿಷ್ಠೆಯಿಂದ ಹಾಗೂ ತ್ಯಾಗಮನೋಭಾವದಿಂದ ಕೆಲಸ ಮಾಡುವಂತೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ಆರ್.ಚಂದ್ರಶೇಖರ್ ಮನವಿ ಮಾಡಿದ್ದು, ಈ ನೇಮಕಾತಿ ಆದೇಶವು ಮುಂದಿನ ಚುನಾವಣೆವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    The post ಮಾದರ ಮಹಾಸಭಾ ಮಂಡ್ಯ ಜಿಲ್ಲಾ ಸಮಿತಿ ರಚನೆ : ಜಿಲ್ಲಾಧ್ಯಕ್ಷರಾಗಿ ಕಾಂತರಾಜ್ ನೇಮಕ appeared first on nudikarnataka.

    Click here to Read More
    Previous Article
    ಅಕ್ರಮ ರೆಸಾರ್ಟ್ ಗಳ ವಿರುದ್ಧ ದನಿ ಎತ್ತಿದ್ದಕ್ಕೆ ಸಸ್ಪೆಂಡ್: ವಕೀಲ ವಿ.ರವಿಕುಮಾರ್ ಬೇಸರ
    Next Article
    ದೀರ್ಘಾವಧಿ ಸಿಎಂ ಆಗಿ ದಾಖಲೆ: ಸಿದ್ದರಾಮಯ್ಯಗೆ ಶುಭಹಾರೈಸಿದ ಶಾಸಕ ರಂಗನಾಥ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment