Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ರಸ್ತೆ ಅಪಘಾತದ ಸಂತ್ರಸ್ತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ: ನಿತಿನ್ ಗಡ್ಕರಿ

    1 week ago

    ನವದೆಹಲಿ, ಜ.8: ಪ್ರಧಾನಿ ನರೇಂದ್ರ ಮೋದಿ ರಸ್ತೆ ಅಪಘಾತದ ಸಂತ್ರಸ್ತರಿಗೆ ಶೀಘ್ರದಲ್ಲೇ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ ಎಂದು ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದರು. ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಸಚಿವರು ಮತ್ತು ಸಾರಿಗೆ ಅಭಿವೃದ್ಧಿ ಮಂಡಳಿಯ 43 ನೇ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಈ ವಿಷಯ ತಿಳಿಸಿದರು. ಈ ಯೋಜನೆಯಡಿಯಲ್ಲಿ, ರಸ್ತೆ ಅಪಘಾತದ ಸಂತ್ರಸ್ತರಿಗೆ ಕನಿಷ್ಠ ಏಳು […]

    The post ರಸ್ತೆ ಅಪಘಾತದ ಸಂತ್ರಸ್ತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ: ನಿತಿನ್ ಗಡ್ಕರಿ appeared first on Namma Udupi Bulletin.



    ನವದೆಹಲಿ, ಜ.8: ಪ್ರಧಾನಿ ನರೇಂದ್ರ ಮೋದಿ ರಸ್ತೆ ಅಪಘಾತದ ಸಂತ್ರಸ್ತರಿಗೆ ಶೀಘ್ರದಲ್ಲೇ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ ಎಂದು ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದರು. ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಸಚಿವರು ಮತ್ತು ಸಾರಿಗೆ ಅಭಿವೃದ್ಧಿ ಮಂಡಳಿಯ 43 ನೇ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಈ ವಿಷಯ ತಿಳಿಸಿದರು.

    ಈ ಯೋಜನೆಯಡಿಯಲ್ಲಿ, ರಸ್ತೆ ಅಪಘಾತದ ಸಂತ್ರಸ್ತರಿಗೆ ಕನಿಷ್ಠ ಏಳು ದಿನಗಳವರೆಗೆ ಒಂದು ಲಕ್ಷ 50 ಸಾವಿರ ರೂಪಾಯಿಗಳವರೆಗೆ ನಗದು ರಹಿತ ಚಿಕಿತ್ಸೆಗೆ ಅರ್ಹತೆ ನೀಡಲಾಗುವುದು ಎಂದು ಸಚಿವರು ಹೇಳಿದರು.

    ಯಾವುದೇ ರಸ್ತೆಯಲ್ಲಿ ಅಪಘಾತಗಳು ಸಂಭವಿಸಿದಲ್ಲಿ, ಸಂತ್ರಸ್ತರನ್ನು ಆಸ್ಪತ್ರೆಗೆ ತಲುಪಲು ಸಹಾಯ ಮಾಡುವ ವ್ಯಕ್ತಿಗೆ 25 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಗಡ್ಕರಿ ಹೇಳಿದರು.

    ಈ ಯೋಜನೆಯ ಪೈಲಟ್ ಯೋಜನೆಯನ್ನು ಇತ್ತೀಚೆಗೆ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢ ಸೇರಿದಂತೆ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.

    The post ರಸ್ತೆ ಅಪಘಾತದ ಸಂತ್ರಸ್ತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ: ನಿತಿನ್ ಗಡ್ಕರಿ appeared first on Namma Udupi Bulletin.

    Click here to Read More
    Previous Article
    ಆಸ್ಟ್ರೇಲಿಯಾಗೆ ಆಶಸ್ ಕಿರೀಟ
    Next Article
    ಎಲ್ಲೂರು: ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment