Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಧ್ಯಪ್ರದೇಶ | ಆರೆಸ್ಸೆಸ್ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ ; ಬಿಜೆಪಿಯ ಕಾರ್ಯಕರ್ತನೆಂದು ಟೀಕಿಸಿದ ಕಾಂಗ್ರೆಸ್‌

    1 week ago

    ಮಧ್ಯಪ್ರದೇಶದ ವಾಣಿಜ್ಯ ರಾಜಧಾನಿ ಇಂದೋರ್‌ನ ಜಿಲ್ಲಾಧಿಕಾರಿ ಶಿವಂ ವರ್ಮಾ ಅವರು ಆರ್‌ಎಸ್‌ಎಸ್‌ನ ಸ್ಥಳೀಯ ಕಚೇರಿಗೆ ಭೇಟಿ ನೀಡಿರುವ ಸಂಗತಿಯು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಜಿಲ್ಲಾಧಿಕಾರಿ ಶಿವಂ ವರ್ಮಾ ಅವರನ್ನು ‘ಬಿಜೆಪಿಯ ಕಾರ್ಯಕರ್ತ’ನೆಂದು ಕಾಂಗ್ರೆಸ್‌ ಟೀಕಿಸಿದೆ. ಇಂದೋರ್‌ನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ 17 ಸಾವುಗಳು ಸಂಭವಿಸಿವೆ. ಹಲವಾರು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದುರಂತ ಘಟನೆಯಿಂದಾಗಿ ಇಡೀ ಇಂದೋರ್‌ ಆತಂಕದಲ್ಲಿದೆ. ಇದೇ ಸಮಯದಲ್ಲಿ, ಜಿಲ್ಲಾಧಿಕಾರಿ ಶಿವಂ ವರ್ಮಾ ಅವರು ಬುಧವಾರ ರಾತ್ರಿ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ […]

    The post ಮಧ್ಯಪ್ರದೇಶ | ಆರೆಸ್ಸೆಸ್ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ ; ಬಿಜೆಪಿಯ ಕಾರ್ಯಕರ್ತನೆಂದು ಟೀಕಿಸಿದ ಕಾಂಗ್ರೆಸ್‌ appeared first on nudikarnataka.



    ಮಧ್ಯಪ್ರದೇಶದ ವಾಣಿಜ್ಯ ರಾಜಧಾನಿ ಇಂದೋರ್‌ನ ಜಿಲ್ಲಾಧಿಕಾರಿ ಶಿವಂ ವರ್ಮಾ ಅವರು ಆರ್‌ಎಸ್‌ಎಸ್‌ನ ಸ್ಥಳೀಯ ಕಚೇರಿಗೆ ಭೇಟಿ ನೀಡಿರುವ ಸಂಗತಿಯು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಜಿಲ್ಲಾಧಿಕಾರಿ ಶಿವಂ ವರ್ಮಾ ಅವರನ್ನು ‘ಬಿಜೆಪಿಯ ಕಾರ್ಯಕರ್ತ’ನೆಂದು ಕಾಂಗ್ರೆಸ್‌ ಟೀಕಿಸಿದೆ.

    ಇಂದೋರ್‌ನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ 17 ಸಾವುಗಳು ಸಂಭವಿಸಿವೆ. ಹಲವಾರು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದುರಂತ ಘಟನೆಯಿಂದಾಗಿ ಇಡೀ ಇಂದೋರ್‌ ಆತಂಕದಲ್ಲಿದೆ. ಇದೇ ಸಮಯದಲ್ಲಿ, ಜಿಲ್ಲಾಧಿಕಾರಿ ಶಿವಂ ವರ್ಮಾ ಅವರು ಬುಧವಾರ ರಾತ್ರಿ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ್ದು, ಆರ್‌ಎಸ್‌ಎಸ್‌ ಸ್ಥಳೀಯ ಪ್ರಚಾರಕ ರಾಜ್‌ ಮೋಹನ್ ಸಿಂಗ್‌ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಭೇಟಿಯ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

    ಸರ್ಕಾರಿ ಅಧಿಯೊಬ್ಬರು ಸಂಘದ ಕಚೇರಿಗೆ ಭೇಟಿ ನೀಡಿ, ಅದರ ಮುಖಂಡರೊಂದಿಗೆ ಚರ್ಚಿಸಿರುವುದು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಶಿವಂ ವರ್ಮಾ ಅವರು ಬಿಜೆಪಿ ಕಾರ್ಯಕರ್ತನಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಜಿತು ಪಟ್ವಾರಿ ಟೀಕಿಸಿದ್ದಾರೆ.

    “ಶಿವಂ ವರ್ಮಾ ಅವರನ್ನು ಭಾರ್ಗವ್ ವರ್ಮಾ ಆರ್‌ಎಸ್‌ಎಸ್ ಕಚೇರಿಗೆ ಕರೆದೊಯ್ದರು. ಸಂಘದ ಕಚೇರಿಗೆ ಭೇಟಿ ನೀಡಿರುವ ಶಿವಂ ವರ್ಮಾ ಅವರು ತಾವು ಆಡಳಿತ ಅಧಿಕಾರಿಯಲ್ಲ ಎಂಬುದನ್ನು ತೋರಿಸಿದ್ದಾರೆ. ಅವರು ಬಿಜೆಪಿ ಸದಸ್ಯನಂತೆ ಕೆಲಸ ಮಾಡುತ್ತಿದ್ದಾರೆ. ನೀವು ಕರ್ತವ್ಯದಲ್ಲಿರುವಾಗ ರಾಜಕೀಯ ಪಕ್ಷಗಳ ಕಚೇರಿಗಳಿಗೆ ಹೋದರೆ, ಕಾಂಗ್ರೆಸ್ ಕಾರ್ಯಕರ್ತರು ನಿಮ್ಮ ಕಾರ್ಯಶೈಲಿಯನ್ನು ಸರಿಪಡಿಸುತ್ತಾರೆ, ”ಎಂದು ಪಟ್ವಾರಿ ಹೇಳಿದ್ದಾರೆ.

    “ಜಿಲ್ಲಾಧಿಕಾರಿ ತಮ್ಮ ಕಚೇರಿಯಲ್ಲಿ ಕೆಲಸ ಮಾಡಬೇಕು, ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಬೇಕು ಹಾಗೂ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಷಯಗಳನ್ನು ಚರ್ಚಿಸಬೇಕು. ಇಂದೋರ್‌ನಲ್ಲಿ ಜನರು ಸಾಯುತ್ತಿದ್ದಾರೆ, ಎಲ್ಲೆಡೆ ಕಲುಷಿತ ನೀರು ತುಂಬಿದೆ. ಆದರೂ, ಜಿಲ್ಲಾಧಿಕಾರಿ ಕೆಲಸ ಮಾಡುತ್ತಿಲ್ಲ. ಅವರು ಬಿಜೆಪಿಗಾಗಿ ಆರ್‌ಎಸ್‌ಎಸ್ ಕಚೇರಿಗೆ ಹೋಗುತ್ತಿದ್ದಾರೆ” ಎಂದು ಪಟ್ವಾರಿ ಆರೋಪಿಸಿದ್ದಾರೆ.

    The post ಮಧ್ಯಪ್ರದೇಶ | ಆರೆಸ್ಸೆಸ್ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ ; ಬಿಜೆಪಿಯ ಕಾರ್ಯಕರ್ತನೆಂದು ಟೀಕಿಸಿದ ಕಾಂಗ್ರೆಸ್‌ appeared first on nudikarnataka.

    Click here to Read More
    Previous Article
    ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಮೈಸೂರು
    Next Article
    ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯಾಗಿ 2 ವರ್ಷ: ಮೈಸೂರಿನಲ್ಲಿ ಲಕ್ಷದೀಪೋತ್ಸವ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment