Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ|ಜಿಲ್ಲಾದ್ಯಂತ ಜೂನ್‌ನಲ್ಲಿ ತಂಬಾಕು ಮುಕ್ತ ವಿಶೇಷ ಅಭಿಯಾನ:ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್

    Source: Dinamana

    26 May 2026, 02:12 PM
    18 hours ago

    ದಾವಣಗೆರೆ: ಜಿಲ್ಲೆಯಲ್ಲಿ ತಂಬಾಕು ಬಳಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ದಾವಣಗೆರೆ ಜಿಲ್ಲೆಯನ್ನು ಸಂಪೂರ್ಣ ತಂಬಾಕು ಮುಕ್ತ ಜಿಲ್ಲೆಯನ್ನಾಗಿಸುವ ಯುವಪೀಳಿಗೆಯನ್ನು ತಂಬಾಕು ಮುಕ್ತಗೊಳಿಸುವ ನಿಟ್ಟಿನಲ್ಲಿ  ಜೂನ್ ತಿಂಗಳಾದ್ಯಂತ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಮತ್ತು ಜಿಲ್ಲೆಯ 10 ಹಳ್ಳಿಗಳನ್ನು ತಂಬಾಕು ಮುಕ್ತ ಹಳ್ಳಿಗಳೆಂದು ಘೋಷಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌  ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಡಿ ಹಮ್ಮಿಕೊಳ್ಳಲಾಗಿದ್ದ ಪ್ರಸಕ್ತ ಸಾಲಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಜೂನ್ 1 ರಿಂದ ಜೂನ್ 30 ರವರೆಗೆ ಒಂದು ತಿಂಗಳ ಕಾಲ ಜಿಲ್ಲಾದ್ಯಂತ ವಿಶೇಷ ತಂಬಾಕುಮುಕ್ತ ಅಭಿಯಾನ ನಡೆಯಲಿದೆ. “ಆಕರ್ಷಕ ಮುಖವಾಡವನ್ನು ಕಳಚುವುದು: ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ತಡೆಯುವುದು“ ಎಂಬ ಪ್ರಸಕ್ತ ಸಾಲಿನ ಧ್ಯೇಯವಾಕ್ಯದೊಂದಿಗೆ ಯುವ ಪೀಳಿಗೆಯನ್ನು ತಂಬಾಕು ಮುಕ್ತಗೊಳಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು. ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ದಾವಣಗೆರೆ ತಾಲ್ಲೂಕಿನ ಒಪ್ಪನನಹಳ್ಳಿ ಒಂಟಿಹಾಳ್, ಉಳುಪಿನಕಟ್ಟೆ, ಸುಲ್ತಾನಿಪುರ; ಹರಿಹರ ತಾಲ್ಲೂಕಿನ ತಿಮ್ಮಲಾಪುರ; ಹೊನ್ನಾಳಿ ತಾಲ್ಲೂಕಿನಹಟ್ಟಿಹಾಳ್‌ಹಾಗೂಜಗಳೂರುತಾಲ್ಲೂಕಿನ  ನರೇನಹಳ್ಳಿ ಸೇರಿದಂತೆ ಒಟ್ಟು 7 ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ನಿಯಮಾವಳಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಮೇ 31 ರಂದು ಈ ಗ್ರಾಮಗಳ ಪ್ರವೇಶದ್ವಾರದಲ್ಲಿ ‘ತಂಬಾಕು ಮುಕ್ತ ಗ್ರಾಮ‘ ಎಂಬ ಸ್ವಾಗತ ಫಲಕಗಳನ್ನು ಅಳವಡಿಸಿ, ಸ್ಥಳೀಯರ ಸಮ್ಮುಖದಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಗುವುದು. ಉಳಿದ 3 ಗ್ರಾಮಗಳನ್ನು ಜೂನ್‌ ಅಂತ್ಯದೊಳಗೆ ತಂಬಾಕು ಮುಕ್ತವೆಂದು  ಘೋಷಿಸಲು  ಸಿದ್ಧತೆ ಮಾಡಿಕೊಳ್ಳಲಾಗಿದೆ  ಎಂದು ತಿಳಿಸಿದರು. ತಂಬಾಕು ಮಾರಾಟ ಮಾಡುವ ಅಂಗಡಿಗಳು ಶಾಲಾ ಕಾಲೇಜುಗಳಿಂದ ಕನಿಷ್ಠ 100 ಮೀಟರ್ ದೂರವಿರಬೇಕು.  ಅಂಗಡಿಗಳ  ಮುಂದೆ “ಇಲ್ಲಿ ಧೂಮಪಾನ ನಿಷೇಧಿಸಲಾಗಿದೆ” ಮತ್ತು “21 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಮಾರಾಟ ಮಾಡಲಾಗುವುದಿಲ್ಲ” ಎಂಬ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 50 ಹಾಗೂ ಪುರಸಭೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 25 ತಂಬಾಕು ಮಾರಾಟ ಪರವಾನಗಿಗಳನ್ನು (TobaccoVendingLicense) ನೀಡುವ ಗುರಿ ಹೊಂದಲಾಗಿದ್ದು, ಕಿರಾಣಿ ಅಂಗಡಿಗಳ ಟ್ರೇಡ್ ಲೈಸೆನ್ಸ್  ಜೊತೆಗೆ ತಂಬಾಕು  ಲೈಸೆನ್ಸ್ ಅನ್ನು  ಕಡ್ಡಾಯವಾಗಿ ಜೋಡಿಸಲು ಸೂಚಿಸಲಾಗಿದೆ. ಕೋಟ್ಪಾ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾಲ್ವರು ಸರಗಳ್ಳರ ಸೆರೆ : 70.37 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
    Next Article
    ದಾವಣಗೆರೆ:ಜನತಾದರ್ಶನದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment