Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಂಡ್ಯನಗರದ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಚಾಲನೆ

    4 days ago

    ಮಂಡ್ಯನಗರದ ಹೊರವಲಯದ ಅಮರಾವತಿ ಹೋಟೆಲ್ ಯಿಂದ ಜ್ಯೋತಿ ಇಂಟರ್ ನ್ಯಾಷನಲ್ ಹೋಟೆಲ್ ವರೆಗೆ ರಸ್ತೆ ನಿರ್ಮಾಣ ಹಾಗೂ ನಗರದ ವ್ಯಾಪ್ತಿಯೊಳಗೆ ಪಾದಚಾರಿ ಮಾರ್ಗ ಒತ್ತುವರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಗಿದೆ. ಒತ್ತುವರಿ ತೆರವುಗೊಳಿಸದೆ ಕಾಮಗಾರಿ ನಡೆಸಲು ಬಿಡುವುದಿಲ್ಲವೆಂದು ಸಂಘಟನೆಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಮತ್ತು ಮಂಡ್ಯ ನಗರಸಭೆ ಜಂಟಿಯಾಗಿ ಮೊದಲಿಗೆ ನಂದಾ ವೃತ್ತದಿಂದ ಮಹವೀರ ವೃತ್ತದವರೆಗೆ ಒತ್ತುವರಿಯಾಗಿರುವ ಪಾದಚಾರಿ ಮಾರ್ಗದ ಗಡಿಯನ್ನು ಗುರುತಿಸಿತು. ಹೆದ್ದಾರಿಯ ಮಧ್ಯ ಭಾಗದಿಂದ ೨೦ ಮೀಟರ್ ಅಂತರದವರೆಗೆ ಯಾವುದೆ […]

    The post ಮಂಡ್ಯನಗರದ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಚಾಲನೆ appeared first on nudikarnataka.



    ಮಂಡ್ಯನಗರದ ಹೊರವಲಯದ ಅಮರಾವತಿ ಹೋಟೆಲ್ ಯಿಂದ ಜ್ಯೋತಿ ಇಂಟರ್ ನ್ಯಾಷನಲ್ ಹೋಟೆಲ್ ವರೆಗೆ ರಸ್ತೆ ನಿರ್ಮಾಣ ಹಾಗೂ ನಗರದ ವ್ಯಾಪ್ತಿಯೊಳಗೆ ಪಾದಚಾರಿ ಮಾರ್ಗ ಒತ್ತುವರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಗಿದೆ.

    ಒತ್ತುವರಿ ತೆರವುಗೊಳಿಸದೆ ಕಾಮಗಾರಿ ನಡೆಸಲು ಬಿಡುವುದಿಲ್ಲವೆಂದು ಸಂಘಟನೆಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಮತ್ತು ಮಂಡ್ಯ ನಗರಸಭೆ ಜಂಟಿಯಾಗಿ ಮೊದಲಿಗೆ ನಂದಾ ವೃತ್ತದಿಂದ ಮಹವೀರ ವೃತ್ತದವರೆಗೆ ಒತ್ತುವರಿಯಾಗಿರುವ ಪಾದಚಾರಿ ಮಾರ್ಗದ ಗಡಿಯನ್ನು ಗುರುತಿಸಿತು. ಹೆದ್ದಾರಿಯ ಮಧ್ಯ ಭಾಗದಿಂದ ೨೦ ಮೀಟರ್ ಅಂತರದವರೆಗೆ ಯಾವುದೆ ಕಟ್ಟಡ ನಿರ್ಮಾಣವನ್ನು ಅಕ್ರಮ ನಿರ್ಮಾಣ ಎಂದೇ ಸುಪ್ರೀಂಕೋರ್ಟ್ ಸಹ ವ್ಯಾಖ್ಯಾನಿಸಿದ್ದು. ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿ ಏಳು ದಿನಗಳೊಳಗೆ ಸ್ವಯಂಪ್ರೇರಿತವಾಗಿ ತೆರವು ಮಾಡಲು ಅವಕಾಶ ಕಲ್ಪಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡ ಸೇವಕರು ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಜಂಟಿಯಾಗಿ ಪ್ರತಿಭಟನೆ ನಡೆಸಿದ್ದವು.

    ಕಾರ್ಯಾಚರಣೆಯಲ್ಲಿ ನಗರಸಭೆ ಅಭಿಯಂತರ ಮಹೇಶ್, ಆರೋಗ್ಯ ನಿರೀಕ್ಷಕ ಚಲುವರಾಜು ಮತ್ತು ನಗರಸಭೆ ಸಿಬ್ಬಂದಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು. ಕಾರ್ಯಾಚರಣೆಗೆ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿತ್ತು.

    ಸಂಘಟನೆಗಳ ಹೋರಾಟಕ್ಕೆ ಮಣಿದು ಆರಂಭಿಸಿರುವ ಒತ್ತುವರಿ ತೆರವು ಕಾರ್ಯವನ್ನು ಯಾವುದೆ ರಾಜಕೀಯ ಒತ್ತಡಕ್ಕೆ ಮಣಿಯದೇ ಮುಂದುವರಿಸಿ ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ವಿಶಾಲ ಪಾದಚಾರಿ ಮಾರ್ಗ ನಿರ್ಮಿಸಬೇಕು. ಸ್ಥಳೀಯ ಶಾಸಕರು ಅಭಿವೃದ್ದಿ ಪರವಾಗಿರುವುದರಿಂದ ಅವರ ಬೆಂಬಲದೊಂದಿಗೆ ಕಾರ್ಯಚರಣೆ ಮುಂದುವರೆಯಲಿ ಎಂದು ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದ್ದಾರೆ.

    The post ಮಂಡ್ಯನಗರದ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಚಾಲನೆ appeared first on nudikarnataka.

    Click here to Read More
    Previous Article
    ಸಂಕ್ರಾಂತಿ ಮರುದಿನವೇ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್
    Next Article
    ಸಾರ್ವಜನಿಕರಿಗೆ ಯೋಜನೆಗಳ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಹೆಚ್.ಸಿ ಮಹದೇವಪ್ಪ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment