Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ರಾಜ್ಯ ಕೈಗಾರಿಕಾ – ಸಹಕಾರ ಮಹಾಮಂಡಳಿ ಅಧ್ಯಕ್ಷರಾಗಿ ಕೆ.ಎಸ್. ಸಂತೋಷ್ ಕುಮಾರ್ ಆಯ್ಕೆ

    2 days ago

    ಕೆ.ಆರ್.ಪೇಟೆ: ಕರ್ನಾಟಕ ರಾಜ್ಯ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಮಹಾಮಂಡಳಿ ನಿಯಮಿತದ ನೂತನ ಅಧ್ಯಕ್ಷರಾಗಿ ಕೆ.ಎಸ್. ಸಂತೋಷ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಮಹಾಮಂಡಳಿಯ ಆಡಳಿತ ಮಂಡಳಿ ಸಭೆಯಲ್ಲಿ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಚುನಾವಣೆಯಿಂದ ಆಯ್ಕೆ ಯಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಕೆ.ಎಸ್. ಸಂತೋಷ್ ಕುಮಾರ್ ಅವರು, ಹಾಲಿ ಪುರಸಭೆ ಸದಸ್ಯರು, ಈ ಹಿಂದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಸ್ಥಾನಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, “ರಾಜ್ಯದ […]

    The post ರಾಜ್ಯ ಕೈಗಾರಿಕಾ – ಸಹಕಾರ ಮಹಾಮಂಡಳಿ ಅಧ್ಯಕ್ಷರಾಗಿ ಕೆ.ಎಸ್. ಸಂತೋಷ್ ಕುಮಾರ್ ಆಯ್ಕೆ appeared first on nudikarnataka.



    ಕೆ.ಆರ್.ಪೇಟೆ: ಕರ್ನಾಟಕ ರಾಜ್ಯ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಮಹಾಮಂಡಳಿ ನಿಯಮಿತದ ನೂತನ ಅಧ್ಯಕ್ಷರಾಗಿ ಕೆ.ಎಸ್. ಸಂತೋಷ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.

    ಮಹಾಮಂಡಳಿಯ ಆಡಳಿತ ಮಂಡಳಿ ಸಭೆಯಲ್ಲಿ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಚುನಾವಣೆಯಿಂದ ಆಯ್ಕೆ ಯಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಕೆ.ಎಸ್. ಸಂತೋಷ್ ಕುಮಾರ್ ಅವರು, ಹಾಲಿ ಪುರಸಭೆ ಸದಸ್ಯರು, ಈ ಹಿಂದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಸ್ಥಾನಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.

    ಅಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, “ರಾಜ್ಯದ ಕುಶಲಕರ್ಮಿಗಳು ಮತ್ತು ಸಣ್ಣ ಕೈಗಾರಿಕಾ ಸಹಕಾರ ಸಂಘಗಳ ಅಭಿವೃದ್ಧಿಗೆ ಮಹಾಮಂಡಳಿಯು ಪೂರಕವಾಗಿ ಕೆಲಸ ಮಾಡಲಿದೆ. ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವ ಮೂಲಕ ಕೈಗಾರಿಕಾ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ನಾನು ಶ್ರಮಿಸುತ್ತೇನೆ,” ಎಂದು ತಿಳಿಸಿದರು.

    ​ಈ ಸಂದರ್ಭದಲ್ಲಿ ​ಮಾಜಿ ಸಚಿವರಾದ ಕೆ.ಸಿ.ನಾರಾಯಣಗೌಡ ರವರು ಎಂ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಅಂಬರೀಶ್ ರವರು, ಮನಮುಲ್ ನಿರ್ದೇಶಕರುಗಳಾದ ಎಂ.ಬಿ ಹರೀಶ್ ಮತ್ತು ಡಾಲುರವಿ ರವರು, ಕೆ.ಪಿ.ಸಿ.ಸಿ ಸದಸ್ಯರಾದ ಕಿಕ್ಕೇರಿ ಸುರೇಶ್ ರವರು, ಕಿಕ್ಕೇರಿ ಪ್ರಭಾಕರ್ ಅವರು, ಕಿರಣ್ ರವರು, ಅಕ್ಕಿಹೆಬ್ಬಾಳು ರಘು ರವರು, ಜಾನಕಿರಾಮು ರವರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕು ಒಕ್ಕಲಿಗರ ವೇದಿಕೆಯ ಗೌರವಧ್ಯಕ್ಷರಾದ ಆನಂದ್ ರವರು, ಹಾಗೂ ತಾಲ್ಲೂಕಿನ ವಿವಿಧ ಗಣ್ಯರು ಅಭಿನಂಧಿಸಿದರು.

    The post ರಾಜ್ಯ ಕೈಗಾರಿಕಾ – ಸಹಕಾರ ಮಹಾಮಂಡಳಿ ಅಧ್ಯಕ್ಷರಾಗಿ ಕೆ.ಎಸ್. ಸಂತೋಷ್ ಕುಮಾರ್ ಆಯ್ಕೆ appeared first on nudikarnataka.

    Click here to Read More
    Previous Article
    ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ ಟ್ವೀಟ್
    Next Article
    ಮುಡಾ ಮಾಜಿ ಅಧ್ಯಕ್ಷ ರಾಜೀವ್ ವಿರುದ್ದ ತನಿಖೆ ಕಾನೂನು ಇಲಾಖೆ ಅಸ್ತು: ಭೈರತಿ ಸುರೇಶ್ ಅಂಗಳದಲ್ಲಿ ಕಡತ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment