Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಹೃದಯಾಘಾತದಿಂದ ಮಂಡ್ಯದ ಯೋಧ ಸಾವು : ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

    2 days ago

    ಮಂಡ್ಯ ನಗರದ ತಾವರೆಗೆರೆ ಬಡಾವಣೆ ಯೋಧ ಎಂ.ಬಿ.ಮಾದೇಗೌಡ (44) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಇವು ಗಡಿ ಭದ್ರತಾ ಪಡೆ (ಬಿ.ಎಸ್.ಎಫ್.) ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಹೃದಯಾಘಾತಕ್ಕೀಡಾದರು. ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, 2000ರಲಿ ಮೈಸೂರಿನಲ್ಲಿ ನಡೆದ BSF ಸೇನಾ ನೇಮಕಾತಿ ರ್‍ಯಾಲಿಯಲ್ಲಿ ಆಯ್ಕೆಯಾಗಿ BSF ಸೇರಿದ್ದರು. ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ ಎಸ್.ಶಿಲ್ಪಾ, ಪುತ್ರ ಮತ್ತು ಪುತ್ರಿ ಇದ್ದಾರೆ. ಸರ್ಕಾರಿ […]

    The post ಹೃದಯಾಘಾತದಿಂದ ಮಂಡ್ಯದ ಯೋಧ ಸಾವು : ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ appeared first on nudikarnataka.



    ಮಂಡ್ಯ ನಗರದ ತಾವರೆಗೆರೆ ಬಡಾವಣೆ ಯೋಧ ಎಂ.ಬಿ.ಮಾದೇಗೌಡ (44) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

    ಇವು ಗಡಿ ಭದ್ರತಾ ಪಡೆ (ಬಿ.ಎಸ್.ಎಫ್.) ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಹೃದಯಾಘಾತಕ್ಕೀಡಾದರು.

    ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, 2000ರಲಿ ಮೈಸೂರಿನಲ್ಲಿ ನಡೆದ BSF ಸೇನಾ ನೇಮಕಾತಿ ರ್‍ಯಾಲಿಯಲ್ಲಿ ಆಯ್ಕೆಯಾಗಿ BSF ಸೇರಿದ್ದರು. ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ ಎಸ್.ಶಿಲ್ಪಾ, ಪುತ್ರ ಮತ್ತು ಪುತ್ರಿ ಇದ್ದಾರೆ.

    ಸರ್ಕಾರಿ ಗೌರವದೊಂದಿಗೆ ನಡೆಯಲಿದೆ ಅಂತ್ಯಕ್ರಿಯೆ

    ಮಂಡ್ಯಕ್ಕೆ ಆಗಮಿಸಿದ್ದ ಮೃತ ಯೋಧ ಪಾರ್ಥಿವ ಶರೀರವನ್ನ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು.

    ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಯೋಧನ ಮೃತ ದೇಹಕ್ಕೆ ಪುಷ್ಪಗುಚ್ಛ ಇರಿಸಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ಅವರು ಗೌರವ ನಮನವನ್ನು ಸಲ್ಲಿಸಿದರು. ನಂತರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

    ಮಂಡ್ಯ ಜಿಲ್ಲಾಡಳಿತದ ವತಿಯಿಂದ ಗೌರವ ಸಲ್ಲಿಸಿದ ನಂತರ ಮೃತ ಕುಟುಂಬಕ್ಕೆ ಶಾಸಕ ಗಣಿಗ ರವಿಕುಮಾರ್, ಡಿಸಿ ಡಾ.ಕುಮಾರ, ಎಸ್ಪಿ ಶೋಭಾರಾಣಿ ಅವರು ಸಾಂತ್ವನ ಹೇಳಿದರು. ಮಧ್ಯಾಹ್ನದ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

    The post ಹೃದಯಾಘಾತದಿಂದ ಮಂಡ್ಯದ ಯೋಧ ಸಾವು : ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ appeared first on nudikarnataka.

    Click here to Read More
    Previous Article
    ಪೊಲೀಸ್ ಪೇದೆಯ ಕೊಂದು ಅನುಕಂಪದ ನೌಕರಿ ಪಡೆಯಲು ಪತ್ನಿ ಪ್ಲ್ಯಾನ್! : ವರದಕ್ಷಿಣೆ ಕಿರುಕುಳ ಕೇಸ್‌ಗೆ ಟ್ವಿಸ್ಟ್ ಕೊಟ್ಟ ಪೇದೆ
    Next Article
    ಸಿಎಂ, ಡಿಸಿಎಂ ಜೊತೆ ರಾಹುಲ್ ಗಾಂಧಿ ಚರ್ಚೆ: ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment