Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ

    2 days ago

    ಜಲ ಜೀವನ ಮಿಷನ್ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲಿಸಿದ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಕಾರ್ಯಪಾಲಕ ಅಭಿಯಂತರರಿಂದ ಮಾಹಿತಿ ಪಡೆದರು. ಮಂಡ್ಯ ತಾಲ್ಲೂಕಿನ ಹನಕೆರೆ, ಮದ್ದೂರು ತಾಲ್ಲೂಕಿನ ಗುಡಿಗೆರೆ ಮತ್ತು ಯಲಾದಹಳ್ಳಿ ಹಾಗೂ ಮಳವಳ್ಳಿ ತಾಲ್ಲೂಕಿನ ಕೆಂಬೂತಗೆರೆ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಗ್ರಾಮದಲ್ಲಿನ ಪ್ರತಿಯೊಂದು ಕುಟುಂಬಗಳಿಗೂ ನೀರು ಸರಬರಾಜು ಮಾಡಲು ಅವಶ್ಯಕವಿರುವ ಕಾಮಗಾರಿಗಳನ್ನು ಯೋಜನೆಯ ಮಾರ್ಗಸೂಚಿಯನುಸಾರ ತೆಗೆದುಕೊಂಡು ಕಾಮಗಾರಿಗಳನ್ನು […]

    The post ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ appeared first on nudikarnataka.



    ಜಲ ಜೀವನ ಮಿಷನ್ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲಿಸಿದ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಕಾರ್ಯಪಾಲಕ ಅಭಿಯಂತರರಿಂದ ಮಾಹಿತಿ ಪಡೆದರು.
     
    ಮಂಡ್ಯ ತಾಲ್ಲೂಕಿನ ಹನಕೆರೆ, ಮದ್ದೂರು ತಾಲ್ಲೂಕಿನ ಗುಡಿಗೆರೆ ಮತ್ತು ಯಲಾದಹಳ್ಳಿ ಹಾಗೂ ಮಳವಳ್ಳಿ ತಾಲ್ಲೂಕಿನ ಕೆಂಬೂತಗೆರೆ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಗ್ರಾಮದಲ್ಲಿನ ಪ್ರತಿಯೊಂದು ಕುಟುಂಬಗಳಿಗೂ ನೀರು ಸರಬರಾಜು ಮಾಡಲು ಅವಶ್ಯಕವಿರುವ ಕಾಮಗಾರಿಗಳನ್ನು ಯೋಜನೆಯ ಮಾರ್ಗಸೂಚಿಯನುಸಾರ ತೆಗೆದುಕೊಂಡು ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಗ್ರಾಮ ಪಂಚಾಯತ್ ಗಳಿಗೆ ಹಸ್ತಾಂತರ ಮಾಡುವಂತೆ ಸೂಚಿಸಿದರು.
     
    ಪೈಪ್ ಲೈನ್ ಅಳವಡಿಸಲು ಕತ್ತರಿಸಲಾಗಿರುವ ರಸ್ತೆ ಭಾಗವನ್ನು ಸರಿಯಾದ ರೀತಿಯಲ್ಲಿ ಮುಚ್ಚಿಲ್ಲದಿರುವುದರಿಂದ ಆನೇಕ ದೂರುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ. ಈ ನಿಟ್ಟಿನಲ್ಲಿ ಅಭಿಯಂತರರುಗಳು ಕೂಡಲೇ ಕ್ರಮಗಳನ್ನು ತೆಗೆದುಕೊಂಡು ಪೈಪ್ ಲೈನ್ ಅಳವಡಿಸಲು ಕತ್ತರಿಸಿರುವ ಭಾಗವನ್ನು ಎಸ್ ಓ ಪಿ ಯಂತೆ ಮರುಪೂರಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
     
    ಓ ಹೆಚ್ ಟಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುರುತಿಸಲಾಗಿರುವ ನಿವೇಶನಗಳನ್ನು ಸಂಬಂಧಪಟ್ಟವರಿಂದ ಹಸ್ತಾಂತರ ಪಡೆಯಲು ಕ್ರಮವಹಿಸಿ ಓ ಹೆಚ್ ಟಿ ಕಾಮಗಾರಿಗಳನ್ನು ಪ್ರಥಮ ಆಧ್ಯತೆಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಸೂಚಿಸಿದರು.
     
    ಗ್ರಾ.ಪಂ. ನೀರುಗಂಟಿಗಳು ನೀರು ಸರಬರಾಜು ವಿತರಣಾ ಪೈಪ್ ಗಳನ್ನು ಪ್ರತಿ ದಿನ ಸಮೀಕ್ಷೆ ನಡೆಸಬೇಕು ಯಾವುದಾದರೂ ಪೈಪ್ ಲೈನ್ ಲೀಕೇಜ್ ಕಂಡುಬಂದಲ್ಲಿ ಕೂಡಲೇ, ಲೀಕೇಜ್ ಅನ್ನು ಸರಿಪಡಿಸಲು ಅಗತ್ಯ ಕ್ರಮವಹಿಸಬೇಕು, ಯಾವುದೇ ಕಾರಣಕ್ಕೂ ಕಲುಷಿತ ನೀರು ಸಾರ್ವಜನಿಕರಿಗೆ ಸರಬರಾಜಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
     
    ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರು ಸರಬರಾಜು ಯೋಜನೆಯಡಿ ಸೃಜಿಸಲಾಗಿರುವ ಸ್ವತ್ತುಗಳನ್ನು ಸಂರಕ್ಷಣೆ ಮಾಡಬೇಕು. ಕಾಲ ಕಾಲಕ್ಕೆ ಅವುಗಳನ್ನು ಸ್ವಚ್ಛಗೊಳಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಫೀಲ್ಡ್ ಟೆಸ್ಟ್ ಕಿಟ್ ಮೂಲಕ ನೀರಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ಮಾಡುವ ಮೂಲಕ ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
     
    ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಪ್ರಮೋದ್ ಕುಮಾರ್, ಮಂಡ್ಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗಣೇಶ್ ಹೆಗಡೆ, ಮದ್ದೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಧುಸೂಧನ್, ಮಳವಳ್ಳಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಂಗಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.

    The post ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ appeared first on nudikarnataka.

    Click here to Read More
    Previous Article
    ಸಂಕ್ರಾಂತಿ ಹಬ್ಬದ ಸಡಗರ: ಹೂವು, ಹಣ್ಣು, ಕಬ್ಬು ಬೆಲೆ ಹೆಚ್ಚಳ, ಎಷ್ಟಿದೆ ಗೊತ್ತಾ ?
    Next Article
    ಭಾರತ- ನ್ಯೂಜಿಲೆಂಡ್ 2ನೇ ODI ಶುರು : ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್‌

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment