Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗುಬ್ಬಿ ಹೊರವಲಯದ ಪೆಟ್ರೋಲ್ ಬಂಕ್ ನಲ್ಲಿ ಪುಂಡರ ಹಾವಳಿ : ಆತಂಕದಲ್ಲಿ ಗುಬ್ಬಿ ನಾಗರೀಕರು

    Source: SuvarnaPragathi

    03 Feb 2026, 10:28 PM
    1 month ago

    ಗುಬ್ಬಿ: ಪಟ್ಟಣದ ಹೊರವಲಯ ಹೇರೂರು ಗ್ರಾಮ ಸಿಐಟಿ ಕಾಲೇಜು ಬಳಿಯ ಎಂಆರ್ ಪಿಎಲ್ ಪೆ ಟ್ರೋಲ್ ಬಂಕ್ ನಲ್ಲಿ ತಡರಾತ್ರಿ ಸುಮಾರು ಏಳೆಂಟು ಜನರ ಗುಂಪು ದೊಣ್ಣೆ ಹಿಡಿದುಕೊಂಡು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗುವ ಜೊತೆಗೆ ಗುಬ್ಬಿ ಪಟ್ಟಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಪೆಟ್ರೋಲ್ ಬಂಕ್ ಗೆ ದ್ವಿಚಕ್ರ ವಾಹನದಲ್ಲಿ ಬಂದ ಪುಂಡರ ಗುಂಪು ಕುಡಿದ ಅಮಲಿನಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟ್ ಸೇದುತ್ತಿದ್ದರು. …

    The post ಗುಬ್ಬಿ ಹೊರವಲಯದ ಪೆಟ್ರೋಲ್ ಬಂಕ್ ನಲ್ಲಿ ಪುಂಡರ ಹಾವಳಿ : ಆತಂಕದಲ್ಲಿ ಗುಬ್ಬಿ ನಾಗರೀಕರು appeared first on ಸುವರ್ಣ ಪ್ರಗತಿ.



    ಗುಬ್ಬಿ: ಪಟ್ಟಣದ ಹೊರವಲಯ ಹೇರೂರು ಗ್ರಾಮ ಸಿಐಟಿ ಕಾಲೇಜು ಬಳಿಯ ಎಂಆರ್ ಪಿಎಲ್ ಪೆ

    ಟ್ರೋಲ್ ಬಂಕ್ ನಲ್ಲಿ ತಡರಾತ್ರಿ ಸುಮಾರು ಏಳೆಂಟು ಜನರ ಗುಂಪು ದೊಣ್ಣೆ ಹಿಡಿದುಕೊಂಡು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗುವ ಜೊತೆಗೆ ಗುಬ್ಬಿ ಪಟ್ಟಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

    ಪೆಟ್ರೋಲ್ ಬಂಕ್ ಗೆ ದ್ವಿಚಕ್ರ ವಾಹನದಲ್ಲಿ ಬಂದ ಪುಂಡರ ಗುಂಪು ಕುಡಿದ ಅಮಲಿನಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟ್ ಸೇದುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದ ಬಂಕ್ ಸಿಬ್ಬಂದಿ ಇಲ್ಲಿ ಸಿಗರೇಟ್ ಸೇದುವಂತಿಲ್ಲ ಎಂದಿದ್ದಕ್ಕೆ ಏಕಾಏಕಿ ದೊಣ್ಣೆ, ಕಬ್ಬಿಣದ ಬಕೆಟ್, ಚೇರ್ ತೆಗೆದುಕೊಂಡು ಬಂಕ್ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಪಟ್ಟಣದಲ್ಲಿ ಹಲವು ಬಡಾವಣೆಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ರಾತ್ರಿ 12 ರವರೆಗೆ ಗುಂಪುಗೂಡಿ ದಾಂಧಲೆ ಮಾಡುವ ಘಟನೆ ಕೆಲ ಬಡಾವಣೆಯಲ್ಲಿ ನಡೆದಿದೆ. ಅಹಿತಕರ ಘಟನೆಗಳು ಹೆಚ್ಚಾಗುವ ಮುನ್ನ ಪೊಲೀಸ್ ಇಲಾಖೆ ಎಚ್ಚೆತ್ತು ಕೊಳ್ಳಬೇಕಿದೆ. ಸಾಮಾಜಿಕ ಜಾಲತಾಣದಲ್ಲಿ ರಾತ್ರಿ ನಡೆದ ಪೆಟ್ರೋಲ್ ಬಂಕ್ ಗಲಭೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು ಇಲ್ಲಿಯವರೆಗೂ ಗುಬ್ಬಿ ಪೊಲೀಸರಿಂದ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

    The post ಗುಬ್ಬಿ ಹೊರವಲಯದ ಪೆಟ್ರೋಲ್ ಬಂಕ್ ನಲ್ಲಿ ಪುಂಡರ ಹಾವಳಿ : ಆತಂಕದಲ್ಲಿ ಗುಬ್ಬಿ ನಾಗರೀಕರು appeared first on ಸುವರ್ಣ ಪ್ರಗತಿ.

    Click here to Read More
    Previous Article
    ಕುಣಿಗಲ್ : ದಾಖಲೆ ಇಲ್ಲದ ಟ್ರ್ಯಾಕ್ಟರ್ ಹಾಗೂ ಆಟೋ ಸೀಜ್ ಮಾಡಿದ ಆರ್.ಟಿ. ಓ ಅಧಿಕಾರಿ
    Next Article
    ಗರ್ಭಿಣಿಯರು ಬೀಟ್ರೂಟ್ ತಿನ್ನುವುದು ಸುರಕ್ಷಿತವೇ?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment